<p><strong>ನರಸಿಂಹರಾಜಪುರ</strong>: ವನ್ಯ ಪ್ರಾಣಿಗಳು ಹತ್ತಿರ ಬಂದಾಗ ಜೋರಾಗಿ ಶಬ್ದ ಮಾಡುವ ಸೌರಶಕ್ತಿ ಚಾಲಿತ ಯಂತ್ರವನ್ನು ಅರಣ್ಯ ಇಲಾಖೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಅಳವಡಿಸಿದೆ. </p>.<p>ಆನೆ–ಮಾನವ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಈ ಯಂತ್ರವನ್ನು ಅಳವಡಿಸಲಾಗಿದೆ. ತಾಲ್ಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆನೆ ಹಾವಳಿ ಹೆಚ್ಚಿರುವ ಜೇನುಕಟ್ಟೆಸರ ಗ್ರಾಮದಲ್ಲಿ ಮರವೊಂದರ ಮೇಲೆ ತಾತ್ಕಾಲಿಕವಾಗಿ ಈ ಯಂತ್ರವನ್ನು ಅಳವಡಿಸಲಾಗಿದೆ.</p>.<p>‘ಮುಂದಿನ ದಿನಗಳಲ್ಲಿ ಈ ಯಂತ್ರವನ್ನು ಕಬ್ಬಿಣದ ಕಂಬದ ಮೇಲೆ ಶಾಶ್ವತವಾಗಿ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ಯಾವ ಗ್ರಾಮಗಳ ವ್ಯಾಪ್ತಿಯಲ್ಲಿ ಆನೆ ಹಾವಳಿ ಹೆಚ್ಚಾಗಿದೆ ಆ ಗ್ರಾಮಗಳ ರಸ್ತೆ ಬದಿಯಲ್ಲಿ ಜಂಗಲ್ ಕ್ಲಿಯರೆನ್ಸ್ ಮಾಡಲಾಗಿದ್ದು, ಬೆಂಕಿರೇಖೆ ನಿರ್ಮಿಸಲಾಗಿದೆ. ಹಾಗಾಗಿ ಆನೆಗಳು ರಸ್ತೆ ಬದಿಯಲ್ಲಿ ನಿಂತರೂ ದೂರದಿಂದಲೇ ಕಾಣಿಸುತ್ತದೆ. ಈ ಯಂತ್ರದಿಂದ ಆನೆಗಳ ಚಲನವಲನದ ಮೇಲೆ ನಿಗಾ ವಹಿಸಲು, ಮುನ್ನೆಚ್ಚರಿಕೆ ವಹಿಸಲು ಸಾಧ್ಯವಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ</strong>: ವನ್ಯ ಪ್ರಾಣಿಗಳು ಹತ್ತಿರ ಬಂದಾಗ ಜೋರಾಗಿ ಶಬ್ದ ಮಾಡುವ ಸೌರಶಕ್ತಿ ಚಾಲಿತ ಯಂತ್ರವನ್ನು ಅರಣ್ಯ ಇಲಾಖೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಅಳವಡಿಸಿದೆ. </p>.<p>ಆನೆ–ಮಾನವ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಈ ಯಂತ್ರವನ್ನು ಅಳವಡಿಸಲಾಗಿದೆ. ತಾಲ್ಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆನೆ ಹಾವಳಿ ಹೆಚ್ಚಿರುವ ಜೇನುಕಟ್ಟೆಸರ ಗ್ರಾಮದಲ್ಲಿ ಮರವೊಂದರ ಮೇಲೆ ತಾತ್ಕಾಲಿಕವಾಗಿ ಈ ಯಂತ್ರವನ್ನು ಅಳವಡಿಸಲಾಗಿದೆ.</p>.<p>‘ಮುಂದಿನ ದಿನಗಳಲ್ಲಿ ಈ ಯಂತ್ರವನ್ನು ಕಬ್ಬಿಣದ ಕಂಬದ ಮೇಲೆ ಶಾಶ್ವತವಾಗಿ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ಯಾವ ಗ್ರಾಮಗಳ ವ್ಯಾಪ್ತಿಯಲ್ಲಿ ಆನೆ ಹಾವಳಿ ಹೆಚ್ಚಾಗಿದೆ ಆ ಗ್ರಾಮಗಳ ರಸ್ತೆ ಬದಿಯಲ್ಲಿ ಜಂಗಲ್ ಕ್ಲಿಯರೆನ್ಸ್ ಮಾಡಲಾಗಿದ್ದು, ಬೆಂಕಿರೇಖೆ ನಿರ್ಮಿಸಲಾಗಿದೆ. ಹಾಗಾಗಿ ಆನೆಗಳು ರಸ್ತೆ ಬದಿಯಲ್ಲಿ ನಿಂತರೂ ದೂರದಿಂದಲೇ ಕಾಣಿಸುತ್ತದೆ. ಈ ಯಂತ್ರದಿಂದ ಆನೆಗಳ ಚಲನವಲನದ ಮೇಲೆ ನಿಗಾ ವಹಿಸಲು, ಮುನ್ನೆಚ್ಚರಿಕೆ ವಹಿಸಲು ಸಾಧ್ಯವಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ಪ್ರವೀಣ್ ಕುಮಾರ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>