<p><strong>ನರಸಿಂಹರಾಜಪುರ</strong>: ಮಾನವ–ವನ್ಯಜೀವಿ ಸಂಘರ್ಷದಿಂದ ಮೃತಪಟ್ಟವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಟಿ.ಡಿ. ರಾಜೇಗೌಡ ಆಗ್ರಹಿಸಿದರು.</p>.<p>ವಿಧಾನಸಭಾ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಭಾಗವಹಿಸಿದ ಶಾಸಕರು ಅರಣ್ಯ ಸಚಿವರಿಗೆ ಪರಿಹಾರ ಮೊತ್ತ ಹೆಚ್ಚಿಸುವಂತೆ ಮನವಿ ಮಾಡಿದರು.</p>.<p>ಇದಕ್ಕೆ ಉತ್ತರಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಮಾನವ-ವನ್ಯಜೀವಿ ಸಂಘರ್ಷದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಮತ್ತು ಮಾಸಾಶನ ನೀಡಲಾಗುತ್ತಿದೆ. ಈ ಹಿಂದೆ ಇದ್ದ ₹15 ಲಕ್ಷ ಪರಿಹಾರದ ಮೊತ್ತವನ್ನು 2025ರ ಏಪ್ರಿಲ್ನಿಂದ ₹20 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಪರಿಹಾರದ ಜತೆಗೆ 5 ವರ್ಷಗಳ ಕಾಲ ಮಾಸಿಕ ₹4 ಸಾವಿರ ಮಾಸಾಶನವನ್ನು ಮೃತರ ಕುಟುಂಬದ ಸದಸ್ಯರಿಗೆ ನೀಡಲಾಗುತ್ತಿದೆ ಎಂದರು.</p>.<p>ಅರಣ್ಯ ಇಲಾಖೆಯಲ್ಲಿ ಕಾಯಂ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರು ಮತ್ತು ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಹಗಲಿರುಳೆನ್ನದೆ ಕ್ಲಿಷ್ಟಕರ ಸನ್ನಿವೇಶದಲ್ಲಿ ಸೇವೆ ಸಲ್ಲಿಸುತ್ತಿದ್ದು, ಕರ್ತವ್ಯನಿರತ ಸಿಬ್ಬಂದಿ ಮೃತಪಟ್ಟಾಗ ಈ ಹಿಂದೆ ₹30 ಲಕ್ಷ ಅನುಗ್ರಹ ಧನ ನೀಡಲಾಗುತ್ತಿತ್ತು. ಈಗ ಆ ಮೊತ್ತವನ್ನು ₹50 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಅವರು ತಿಳಿಸಿದರು.</p>.<p>ಆದರೆ, ಇದಕ್ಕೆ ಒಪ್ಪದ ಶಾಸಕ ರಾಜೇಗೌಡ ಅರಣ್ಯ ಸಿಬ್ಬಂದಿಗೆ ನೀಡಿದಂತೆಯೇ ಇತರೇ ವ್ಯಕ್ತಿಗಳಿಗೂ ₹50 ಲಕ್ಷ ಪರಿಹಾರವನ್ನು ನೀಡುವುದರ ಮೂಲಕ ಸಮಾನತೆ ಕಾಪಾಡಬೇಕೆಂದು ಒತ್ತಾಯಿಸಿದರು.</p>.<p>ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದ ಅನ್ವಯ ಅವಕಾಶ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಆನೆ ಸೇರಿದಂತೆ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ</strong>: ಮಾನವ–ವನ್ಯಜೀವಿ ಸಂಘರ್ಷದಿಂದ ಮೃತಪಟ್ಟವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡುವಂತೆ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಟಿ.ಡಿ. ರಾಜೇಗೌಡ ಆಗ್ರಹಿಸಿದರು.</p>.<p>ವಿಧಾನಸಭಾ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಭಾಗವಹಿಸಿದ ಶಾಸಕರು ಅರಣ್ಯ ಸಚಿವರಿಗೆ ಪರಿಹಾರ ಮೊತ್ತ ಹೆಚ್ಚಿಸುವಂತೆ ಮನವಿ ಮಾಡಿದರು.</p>.<p>ಇದಕ್ಕೆ ಉತ್ತರಿಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಮಾನವ-ವನ್ಯಜೀವಿ ಸಂಘರ್ಷದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಮತ್ತು ಮಾಸಾಶನ ನೀಡಲಾಗುತ್ತಿದೆ. ಈ ಹಿಂದೆ ಇದ್ದ ₹15 ಲಕ್ಷ ಪರಿಹಾರದ ಮೊತ್ತವನ್ನು 2025ರ ಏಪ್ರಿಲ್ನಿಂದ ₹20 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಪರಿಹಾರದ ಜತೆಗೆ 5 ವರ್ಷಗಳ ಕಾಲ ಮಾಸಿಕ ₹4 ಸಾವಿರ ಮಾಸಾಶನವನ್ನು ಮೃತರ ಕುಟುಂಬದ ಸದಸ್ಯರಿಗೆ ನೀಡಲಾಗುತ್ತಿದೆ ಎಂದರು.</p>.<p>ಅರಣ್ಯ ಇಲಾಖೆಯಲ್ಲಿ ಕಾಯಂ ನೌಕರರಾಗಿ ಸೇವೆ ಸಲ್ಲಿಸುತ್ತಿರುವವರು ಮತ್ತು ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಹಗಲಿರುಳೆನ್ನದೆ ಕ್ಲಿಷ್ಟಕರ ಸನ್ನಿವೇಶದಲ್ಲಿ ಸೇವೆ ಸಲ್ಲಿಸುತ್ತಿದ್ದು, ಕರ್ತವ್ಯನಿರತ ಸಿಬ್ಬಂದಿ ಮೃತಪಟ್ಟಾಗ ಈ ಹಿಂದೆ ₹30 ಲಕ್ಷ ಅನುಗ್ರಹ ಧನ ನೀಡಲಾಗುತ್ತಿತ್ತು. ಈಗ ಆ ಮೊತ್ತವನ್ನು ₹50 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಅವರು ತಿಳಿಸಿದರು.</p>.<p>ಆದರೆ, ಇದಕ್ಕೆ ಒಪ್ಪದ ಶಾಸಕ ರಾಜೇಗೌಡ ಅರಣ್ಯ ಸಿಬ್ಬಂದಿಗೆ ನೀಡಿದಂತೆಯೇ ಇತರೇ ವ್ಯಕ್ತಿಗಳಿಗೂ ₹50 ಲಕ್ಷ ಪರಿಹಾರವನ್ನು ನೀಡುವುದರ ಮೂಲಕ ಸಮಾನತೆ ಕಾಪಾಡಬೇಕೆಂದು ಒತ್ತಾಯಿಸಿದರು.</p>.<p>ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದ ಅನ್ವಯ ಅವಕಾಶ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಆನೆ ಸೇರಿದಂತೆ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>