ತಕ್ಷಣವೇ ಸ್ಥಳೀಯ ಪೆಟ್ರೋಲ್ ಬಂಕ್ ಬಿನು, ಶಕೀಲ್, ಪ್ರಕಾಶ್, ಸಚಿನ್, ರಂಜಿತ್ ಎನ್ನುವವರು ಮಹಿಳೆಯ ಧ್ವನಿ ಕೇಳಿ ಬರುತ್ತಿರುವ ಜಾಗದಲ್ಲಿ ಚಪ್ಪಡಿ ತೆಗೆದಿದ್ದಾರೆ. ಆಗ, ತಲೆಗೆ ಗಾಯವಾಗಿ ಅರೆ ಪ್ರಜ್ಞಾವ್ಯವಸ್ಥೆಯಲ್ಲಿ ಮಹಿಳೆ ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ನರಸಿಂಹರಾಜಪುರದ ಸಮಾಜ ಸೇವಕಿ ಜುಬೇದಾ ಅವರಿಗೆ ಮಾಹಿತಿ ನೀಡಿದ್ದಾರೆ. ಅಂಬುಲೆನ್ಸ್ ನೊಂದಿಗೆ ಬಂದ ಜುಬೇದಾ, ಆಮಹಿಳೆಯನ್ನು ಸ್ವಚ್ಛಗೊಳಿಸಿ, ಬೇರೆ ಬಟ್ಟೆ ತೊಡಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.