<p><strong>ನರಸಿಂಹರಾಜಪುರ:</strong> ಅಂಗವಿಕಲ ಮಕ್ಕಳಿಗೆ ಅನುಕಂಪ ಬೇಡ ಅವಕಾಶ ನೀಡಬೇಕು ಎಂದು ಉಪತಹಶೀಲ್ದಾರ್ ವೇಣುಗೋಪಾಲ್ ಹೇಳಿದರು.</p>.<p>ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಪಟ್ಟಣದ ಬಸ್ತಿಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ವಿಶ್ವ ಅಂಗವಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ತಾಲ್ಲೂಕು ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎ.ಇ.ಅಶೋಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಗವಿಕಲ ಮಕ್ಕಳಿಗೆ ವಿಶೇಷ ಸಾಮರ್ಥ್ಯ ಇರುತ್ತದೆ. ಇಂತಹ ಮಕ್ಕಳಿಗೆ ಎಲ್ಲ ಕ್ಷೇತ್ರಗಳಲ್ಲೂ ಅವಕಾಶ ನೀಡಬೇಕು. ಅವರಿಗೂ ಭಾವನೆಗಳಿದ್ದು ಅದನ್ನು ಅರ್ಥ ಮಾಡಿಕೊಂಡು ಶಿಕ್ಷಣ ನೀಡಬೇಕು ಎಂದರು.</p>.<p>ನೋಡಲ್ ಅಧಿಕಾರಿ ಬಿಐಈಆರ್ ಟಿ ತಿಮ್ಮೇಶ್ ಮಾತನಾಡಿ, ಡಿ.10ರಂದು ತಾಲ್ಲೂಕು ಮಟ್ಟದ ಅಂಗವಿಕಲ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ಆಯೋಜಿಸಲಾಗಿದೆ. ಎಲ್ಲ ಮಕ್ಕಳು ಪೋಷಕರೊಂದಿಗೆ ಬಂದು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.</p>.<p>ಸಿಆರ್ಪಿ ದೇವರಾಜ ಮಾತನಾಡಿ, ಅಂಗವಿಕಲ ಮಕ್ಕಳಿಗೆ ವಿಶೇಷ ಗ್ರಹಿಕೆ ಶಕ್ತಿ, ಗುರುತಿಸುವ ಕೌಶಲ, ಜ್ಞಾನ ಗುಣಗಳಿರುತ್ತವೆ. ಹೇಳಿದ ಎಲ್ಲ ಕೆಲಸಗಳನ್ನು ಸಮರ್ಪಕವಾಗಿ ಮಾಡುವ ಸಾಮರ್ಥ್ಯವಿರುತ್ತದೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಿಕ್ಷಣ ನೀಡಿದರೆ ಉತ್ತಮ ಭವಿಷ್ಯ ರೂಪಿಸಬಹುದು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಸೇವ್ಯಾ ನಾಯ್ಕ ಮಾತನಾಡಿ, ಶಿಕ್ಷಣ ಇಲಾಖೆಯಿಂದ ಅಂಗವಿಕಲ ಮಕ್ಕಳಿಗೆ ಅನೇಕ ಸೌಲಭ್ಯಗಳನ್ನು ನೀಡಿದ್ದು ಪೋಷಕರು ಮತ್ತು ಮಕ್ಕಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಸಿಂಹರಾಜಪುರ:</strong> ಅಂಗವಿಕಲ ಮಕ್ಕಳಿಗೆ ಅನುಕಂಪ ಬೇಡ ಅವಕಾಶ ನೀಡಬೇಕು ಎಂದು ಉಪತಹಶೀಲ್ದಾರ್ ವೇಣುಗೋಪಾಲ್ ಹೇಳಿದರು.</p>.<p>ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಪಟ್ಟಣದ ಬಸ್ತಿಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ವಿಶ್ವ ಅಂಗವಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ತಾಲ್ಲೂಕು ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎ.ಇ.ಅಶೋಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಗವಿಕಲ ಮಕ್ಕಳಿಗೆ ವಿಶೇಷ ಸಾಮರ್ಥ್ಯ ಇರುತ್ತದೆ. ಇಂತಹ ಮಕ್ಕಳಿಗೆ ಎಲ್ಲ ಕ್ಷೇತ್ರಗಳಲ್ಲೂ ಅವಕಾಶ ನೀಡಬೇಕು. ಅವರಿಗೂ ಭಾವನೆಗಳಿದ್ದು ಅದನ್ನು ಅರ್ಥ ಮಾಡಿಕೊಂಡು ಶಿಕ್ಷಣ ನೀಡಬೇಕು ಎಂದರು.</p>.<p>ನೋಡಲ್ ಅಧಿಕಾರಿ ಬಿಐಈಆರ್ ಟಿ ತಿಮ್ಮೇಶ್ ಮಾತನಾಡಿ, ಡಿ.10ರಂದು ತಾಲ್ಲೂಕು ಮಟ್ಟದ ಅಂಗವಿಕಲ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ಆಯೋಜಿಸಲಾಗಿದೆ. ಎಲ್ಲ ಮಕ್ಕಳು ಪೋಷಕರೊಂದಿಗೆ ಬಂದು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.</p>.<p>ಸಿಆರ್ಪಿ ದೇವರಾಜ ಮಾತನಾಡಿ, ಅಂಗವಿಕಲ ಮಕ್ಕಳಿಗೆ ವಿಶೇಷ ಗ್ರಹಿಕೆ ಶಕ್ತಿ, ಗುರುತಿಸುವ ಕೌಶಲ, ಜ್ಞಾನ ಗುಣಗಳಿರುತ್ತವೆ. ಹೇಳಿದ ಎಲ್ಲ ಕೆಲಸಗಳನ್ನು ಸಮರ್ಪಕವಾಗಿ ಮಾಡುವ ಸಾಮರ್ಥ್ಯವಿರುತ್ತದೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಿಕ್ಷಣ ನೀಡಿದರೆ ಉತ್ತಮ ಭವಿಷ್ಯ ರೂಪಿಸಬಹುದು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಸೇವ್ಯಾ ನಾಯ್ಕ ಮಾತನಾಡಿ, ಶಿಕ್ಷಣ ಇಲಾಖೆಯಿಂದ ಅಂಗವಿಕಲ ಮಕ್ಕಳಿಗೆ ಅನೇಕ ಸೌಲಭ್ಯಗಳನ್ನು ನೀಡಿದ್ದು ಪೋಷಕರು ಮತ್ತು ಮಕ್ಕಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>