ಚಿಕ್ಕಮಗಳೂರು: ಸಂತೋಷ್ ಪಾಟೀಲ್ ಆತ್ಯಹತ್ಯೆ ಪ್ರಕರಣದ ಆರೋಪಿ ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕಾಂಗ್ರೆಸ್ ವತಿಯಿಂದ ಸಭೆ ಏರ್ಪಡಿಸಲಾಗಿತ್ತು.
ವೇದಿಕೆಯಲ್ಲಿ ಭಾಷಣ ಮಾಡುತ್ತಿದ್ದ ಸಿದ್ದರಾಮಯ್ಯ ಅವರು,‘ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಯಹತ್ಯೆ ಪ್ರಕರಣದಲ್ಲಿಈಶ್ವರಪ್ಪ ಅವರನ್ನು ಬಂಧಿಸಬೇಕು. ಅವರನ್ನು ಬಂಧಿಸದಿದ್ದರೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ’ ಎಂದುಹೇಳಿದರು.
ಭಾಷಣ ಮುಂದುವರಿದಿತ್ತು. ಈ ವೇಳೆ ವೇದಿಕೆ ಬಳಿಗೆ ಬಂದ ಯುವತಿಯೊಬ್ಬರು, ‘ನಾನು ನಿಮ್ಮ ಅಭಿಮಾನಿ, ನಿಮ್ಮ ಜತೆ ಸೆಲ್ಫಿ ತೆಗೆಸಿಕೊಳ್ಳಬೇಕು’ ಎಂದು ಸಿದ್ದರಾಮಯ್ಯ ಅವರಲ್ಲಿಬೇಡಿಕೆ ಇಟ್ಟರು. ಅಷ್ಟಲ್ಲದೆ, ಭಾಷಣ ಮುಗಿಯವವರೆಗೂ ಅಲ್ಲಿಯೇ ಕಾದು ನಿಂತಿದ್ದರು.
ಪೊಲೀಸರು ಯವತಿಯ ಬ್ಯಾಗು ಎಲ್ಲವನ್ನು ಪರಿಶೀಲಿಸಿದರು. ಆದಾಗ್ಯೂ, ಫೋಟೊ ತೆಗೆಸಿಕೊಳ್ಳಲು ಅವಕಾಶ ಸಿಗಲಿಲ್ಲ. ಆಗ ಯುವತಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.