<p><strong>ಕಡೂರು:</strong> ‘ಮರಾಠಾ ಅಭಿವೃದ್ಧಿ ಪ್ರಾಧಿಕಾರದ ರಚನೆ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಇದು ಜೇನುಗೂಡಿಗೆ ಕಲ್ಲು ಹೊಡೆದಂತೆ ಎಂಬುದನ್ನು ಸರ್ಕಾರ ಗಮನಿಸುವ ಅಗತ್ಯವಿದೆ’ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ತಿಳಿಸಿದರು.</p>.<p><strong>ಇದನ್ನು ಓದಿ:</strong><a href="https://www.prajavani.net/op-ed/editorial/editors-note-prajavani-android-app-and-pv-ios-app-launched-780126.html" target="_blank">ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ</a></p>.<p>ಶುಕ್ರವಾರ ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮರಾಠಾ ಸಮುದಾಯದ ಬಗ್ಗೆ ಕನ್ನಡಿಗರಲ್ಲಿ ಯಾವ ದ್ವೇಷವಿಲ್ಲ, ಪ್ರೀತಿಯಿದೆ. ಸಹೋದರ ಭಾವನೆಯಿದೆ. ಆ ಸಮುದಾಯದ ಬಡವರಿಗೆ ಅನುಕೂಲವಾಗುತ್ತದೆ ಎಂದರೆ ಅದಕ್ಕೆ ಯಾವುದೇ ಅಪಸ್ವರ ಇಲ್ಲ. ಆದರೆ, ಈ ವಿಚಾರಕ್ಕೂ ಗಡಿ-ಭಾಷೆಗೂ ನೇರ ಸಂಬಂಧವಿದೆ. ಬೆಳಗಾವಿ ನಮ್ಮದು ಎಂದು ಸದಾ ಪ್ರತಿಪಾದಿಸುವ ಮಹಾರಾಷ್ಟ್ರದ ನಿಲುವನ್ನು ಕನ್ನಡಿಗರು ಒಪ್ಪಲು ಸಾಧ್ಯವಿಲ್ಲ. ಈ ವಿಚಾರ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ’ ಎಂದರು.</p>.<p><strong>ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್:</strong><a href="https://play.google.com/store/apps/details?id=com.tpml.pv" target="_blank">ಆಂಡ್ರಾಯ್ಡ್ ಆ್ಯಪ್</a>|<a href="https://apps.apple.com/in/app/prajavani-kannada-news-app/id1535764933" target="_blank">ಐಒಎಸ್ ಆ್ಯಪ್</a></p>.<p>‘ಬೆಳಗಾವಿ ಜೊತೆಗೆ ಕಾರವಾರವೂ ತಮ್ಮದು ಎಂದಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯ ನಡೆ ಉದ್ಧಟತನದ ಪರಮಾವಧಿ. ವಾಸ್ತವವಾಗಿ ಕನ್ನಡಿಗರೇ ಹೆಚ್ಚಿರುವ ಸೊಲ್ಲಾಪುರ ಮುಂತಾದ ಪ್ರದೇಶಗಳು ಕರ್ನಾಟಕಕ್ಕೇ ಸೇರಬೇಕು. ಸಾಮರಸ್ಯ ಕದಡುವ ಇಂತಹ ಹೇಳಿಕೆಗಳನ್ನು ನೀಡುವ ಕಾರ್ಯವನ್ನು ನಿಲ್ಲಿಸಬೇಕು’ ಎಂದರು.</p>.<p>‘ಮಹಾಜನ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದ್ದಿದ್ದರೆ ಇಂದು ಈ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ. ಇದರ ಜವಾಬ್ದಾರಿಯನ್ನು ಕೇಂದ್ರವೂ ಹೊರಬೇಕು. ಇಂತಹ ಪ್ರಕ್ಷುಬ್ಧ ಸಮಯದಲ್ಲಿ ಮರಾಠಾ ಪ್ರಾಧಿಕಾರದ ರಚನೆ ಕೇವಲ ರಾಜಕೀಯ ಲಾಭಕ್ಕಾಗಿಯಲ್ಲದೆ ಬೇರೇನೂ ಇಲ್ಲ ಎಂಬುದು ವಾಸ್ತವಿಕ ಸಂಗತಿ’ ಎಂದರು.</p>.<p>‘ಈಗಾಗಲೇ ಕನ್ನಡ ಪರ ಸಂಘಟನೆಗಳು ಪ್ರಾಧಿಕಾರ ರಚನೆಗೆ ವಿರೋಧ ವ್ಯಕ್ತಪಡಿಸಿವೆ. ವಿಚಾರವಾದಿಗಳು, ಸಾಹಿತಿಗಳೂ ಸರ್ಕಾರದ ಈ ನಡೆಯನ್ನು ವಿರೋಧಿಸಿದ್ದಾರೆ. ರಾಜ್ಯ ಬಂದ್ಗೂ ಕರೆ ನೀಡಲಾಗಿದೆ. ಈಗಾಗಲೇ ಗಡಿ ವಿಚಾರದಲ್ಲಿ ತಗಾದೆಯಿರುವುದರಿಂದ ಈ ಸಂದರ್ಭದಲ್ಲಿ ಯಾವುದೇ ಅವಘಡ ನಡೆದರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ. ಕನ್ನಡಿಗರ ಹಿತಾಸಕ್ತಿ ಕಾಪಾಡುವ ಯಾವ ಅಂಶವೂ ಈ ಪ್ರಾಧಿಕಾರ ರಚನೆಯಲ್ಲಿಲ್ಲ. ಈ ನಡುವೆ ಇದು ಪ್ರಾಧಿಕಾರವಲ್ಲ- ನಿಗಮ ಎಂಬ ಹೇಳಿಕೆ ಸರ್ಕಾರದ ಕಡೆಯಿಂದ ಹೊರಬಂದಿದೆ. ಅದೇನೇಯಿದ್ದರೂ ಮಹಾರಾಷ್ಟ್ರ ಇದನ್ನೇ ಬೆಳಗಾವಿ ವಿಚಾರದಲ್ಲಿ ಅಸ್ತ್ರವಾಗಿಸಿಕೊಳ್ಳುವ ಸಾಧ್ಯತೆಯೂ ಇರುವುದರಿಂದ ಈ ಪ್ರಸ್ತಾವವನ್ನು ರಾಜ್ಯ ಸರ್ಕಾರ ಕೈಬಿಡಬೇಕೆಂಬುದು ನಮ್ಮ ಆಗ್ರಹ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು:</strong> ‘ಮರಾಠಾ ಅಭಿವೃದ್ಧಿ ಪ್ರಾಧಿಕಾರದ ರಚನೆ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಇದು ಜೇನುಗೂಡಿಗೆ ಕಲ್ಲು ಹೊಡೆದಂತೆ ಎಂಬುದನ್ನು ಸರ್ಕಾರ ಗಮನಿಸುವ ಅಗತ್ಯವಿದೆ’ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ತಿಳಿಸಿದರು.</p>.<p><strong>ಇದನ್ನು ಓದಿ:</strong><a href="https://www.prajavani.net/op-ed/editorial/editors-note-prajavani-android-app-and-pv-ios-app-launched-780126.html" target="_blank">ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ</a></p>.<p>ಶುಕ್ರವಾರ ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮರಾಠಾ ಸಮುದಾಯದ ಬಗ್ಗೆ ಕನ್ನಡಿಗರಲ್ಲಿ ಯಾವ ದ್ವೇಷವಿಲ್ಲ, ಪ್ರೀತಿಯಿದೆ. ಸಹೋದರ ಭಾವನೆಯಿದೆ. ಆ ಸಮುದಾಯದ ಬಡವರಿಗೆ ಅನುಕೂಲವಾಗುತ್ತದೆ ಎಂದರೆ ಅದಕ್ಕೆ ಯಾವುದೇ ಅಪಸ್ವರ ಇಲ್ಲ. ಆದರೆ, ಈ ವಿಚಾರಕ್ಕೂ ಗಡಿ-ಭಾಷೆಗೂ ನೇರ ಸಂಬಂಧವಿದೆ. ಬೆಳಗಾವಿ ನಮ್ಮದು ಎಂದು ಸದಾ ಪ್ರತಿಪಾದಿಸುವ ಮಹಾರಾಷ್ಟ್ರದ ನಿಲುವನ್ನು ಕನ್ನಡಿಗರು ಒಪ್ಪಲು ಸಾಧ್ಯವಿಲ್ಲ. ಈ ವಿಚಾರ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ’ ಎಂದರು.</p>.<p><strong>ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವ ಲಿಂಕ್:</strong><a href="https://play.google.com/store/apps/details?id=com.tpml.pv" target="_blank">ಆಂಡ್ರಾಯ್ಡ್ ಆ್ಯಪ್</a>|<a href="https://apps.apple.com/in/app/prajavani-kannada-news-app/id1535764933" target="_blank">ಐಒಎಸ್ ಆ್ಯಪ್</a></p>.<p>‘ಬೆಳಗಾವಿ ಜೊತೆಗೆ ಕಾರವಾರವೂ ತಮ್ಮದು ಎಂದಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯ ನಡೆ ಉದ್ಧಟತನದ ಪರಮಾವಧಿ. ವಾಸ್ತವವಾಗಿ ಕನ್ನಡಿಗರೇ ಹೆಚ್ಚಿರುವ ಸೊಲ್ಲಾಪುರ ಮುಂತಾದ ಪ್ರದೇಶಗಳು ಕರ್ನಾಟಕಕ್ಕೇ ಸೇರಬೇಕು. ಸಾಮರಸ್ಯ ಕದಡುವ ಇಂತಹ ಹೇಳಿಕೆಗಳನ್ನು ನೀಡುವ ಕಾರ್ಯವನ್ನು ನಿಲ್ಲಿಸಬೇಕು’ ಎಂದರು.</p>.<p>‘ಮಹಾಜನ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದ್ದಿದ್ದರೆ ಇಂದು ಈ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ. ಇದರ ಜವಾಬ್ದಾರಿಯನ್ನು ಕೇಂದ್ರವೂ ಹೊರಬೇಕು. ಇಂತಹ ಪ್ರಕ್ಷುಬ್ಧ ಸಮಯದಲ್ಲಿ ಮರಾಠಾ ಪ್ರಾಧಿಕಾರದ ರಚನೆ ಕೇವಲ ರಾಜಕೀಯ ಲಾಭಕ್ಕಾಗಿಯಲ್ಲದೆ ಬೇರೇನೂ ಇಲ್ಲ ಎಂಬುದು ವಾಸ್ತವಿಕ ಸಂಗತಿ’ ಎಂದರು.</p>.<p>‘ಈಗಾಗಲೇ ಕನ್ನಡ ಪರ ಸಂಘಟನೆಗಳು ಪ್ರಾಧಿಕಾರ ರಚನೆಗೆ ವಿರೋಧ ವ್ಯಕ್ತಪಡಿಸಿವೆ. ವಿಚಾರವಾದಿಗಳು, ಸಾಹಿತಿಗಳೂ ಸರ್ಕಾರದ ಈ ನಡೆಯನ್ನು ವಿರೋಧಿಸಿದ್ದಾರೆ. ರಾಜ್ಯ ಬಂದ್ಗೂ ಕರೆ ನೀಡಲಾಗಿದೆ. ಈಗಾಗಲೇ ಗಡಿ ವಿಚಾರದಲ್ಲಿ ತಗಾದೆಯಿರುವುದರಿಂದ ಈ ಸಂದರ್ಭದಲ್ಲಿ ಯಾವುದೇ ಅವಘಡ ನಡೆದರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ. ಕನ್ನಡಿಗರ ಹಿತಾಸಕ್ತಿ ಕಾಪಾಡುವ ಯಾವ ಅಂಶವೂ ಈ ಪ್ರಾಧಿಕಾರ ರಚನೆಯಲ್ಲಿಲ್ಲ. ಈ ನಡುವೆ ಇದು ಪ್ರಾಧಿಕಾರವಲ್ಲ- ನಿಗಮ ಎಂಬ ಹೇಳಿಕೆ ಸರ್ಕಾರದ ಕಡೆಯಿಂದ ಹೊರಬಂದಿದೆ. ಅದೇನೇಯಿದ್ದರೂ ಮಹಾರಾಷ್ಟ್ರ ಇದನ್ನೇ ಬೆಳಗಾವಿ ವಿಚಾರದಲ್ಲಿ ಅಸ್ತ್ರವಾಗಿಸಿಕೊಳ್ಳುವ ಸಾಧ್ಯತೆಯೂ ಇರುವುದರಿಂದ ಈ ಪ್ರಸ್ತಾವವನ್ನು ರಾಜ್ಯ ಸರ್ಕಾರ ಕೈಬಿಡಬೇಕೆಂಬುದು ನಮ್ಮ ಆಗ್ರಹ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>