ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ಮಾತನಾಡಿ, ‘ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು ಎಂದು ಬಿಜೆಪಿ ಭರವಸೆ ನೀಡಿತ್ತು. ಕೇಂದ್ರದಲ್ಲಿ ಬಿಜೆಪಿ ಆಡಳಿತ ಚುಕ್ಕಾಣಿ ಹಿಡಿದು ಮೂರು ವರ್ಷಗಳಾಗಿವೆ. ಮೂರು ವರ್ಷಕ್ಕೆ ಆರು ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಈವರೆಗೆ ಶೇ 10ರಷ್ಟು ಮಾತ್ರ ಉದ್ಯೋಗ ಒದಗಿಸಲಾಗಿದೆ. ನಿರುದ್ಯೋಗ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ’ ಎಂದು ದೂರಿದರು.