<p><strong>ಬಾಳೆಹೊನ್ನೂರು:</strong> ಪಟ್ಟಣದ ಸುತ್ತಮುತ್ತ ಕಳೆದ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಪಾಯದ ಮಟ್ಟದಲ್ಲಿ ಭದ್ರಾ ನದಿ ತುಂಬಿ ಹರಿಯುತ್ತಿದ್ದು ಜನ ಜೀವನ ಆಸ್ತವ್ಯಸ್ತಗೊಂಡಿದೆ.<br /> <br /> ಪಟ್ಟಣದ ಸಮೀಪದ ಭೈರೆಗುಡ್ಡ ಹೊಳೆಬಾಗಿಲು ಎಂಬಲ್ಲಿ ನದಿಯ ಪ್ರವಾಹ ಐದು ಮನೆಗಳಿಗೆ ನುಗ್ಗುವ ಭೀತಿಯ ಹಿನ್ನೆಲೆಯಲ್ಲಿ ನರಸಿಂಹರಾಜಪುರದ ತಹಶೀಲ್ದಾರ್ ಕೃಷ್ಣಮೂರ್ತಿ, ಠಾಣಾಧಿಕಾರಿ ಟಿ.ಎಸ್.ಮಧು, ಉಪ ತಹಶೀಲ್ದಾರ್ ಮೋಹನ್, ಗ್ರಾಮ ಲೆಕ್ಕಿಗ ಸೋಮಶೇಖರ್ ಸ್ಥಳಕ್ಕೆ ಭೇಟಿ ನೀಡಿ ಅವರನ್ನು ತಕ್ಷಣ ತೆರವುಗೊಳಿಸುವಂತೆ ಸೂಚಿಸಿದರು.<br /> <br /> ಚಿಕ್ಕಮಗಳೂರು-ಬಾಳೆಹೊನ್ನೂರು ಸಂಪರ್ಕ ಕಲ್ಪಿಸುವ ಭದ್ರಾ ಸೇತುವೆ ಸುತ್ತಮುತ್ತಲಿನ ಗದ್ದೆ ಮತ್ತುಅಡಿಕೆ ತೋಟಗಳಿಗೆ ಭದ್ರಾ ನದಿಯ ನೀರು ತುಂಬಿದ್ದು ಪ್ರವಾಹದ ಭೀತಿ ಎದುರಾಗಿದೆ.<br /> <br /> ಮಳೆಯ ಪರಿಣಾಮ ಕಡ್ಲೆಮಕ್ಕಿ ಸಮೀಪದ ಕೃಷ್ಣಾಚಾರ್ ಎಂಬುವವರ ಮನೆಯ ಗೋಡೆ ಕುಸಿದು ಬ್ದ್ದಿದು ಹಾನಿ ಸಂಭವಿಸಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದರು. ಬುಧವಾರವೂ ಕೂಡ ಬಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬಾಳೆಹೊನ್ನೂರು -ಕಳಸ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗ ಕ್ಕೆ ನೀರು ನುಗ್ಗಿ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಹೆಚ್ಚಿದೆ.<br /> <br /> ಸೀಗೋಡು ಕೆರೆ ಸಮೀಪ ಮರ ರಸ್ತೆಗೆ ಉರುಳಿದ ಪರಿಣಾಮ ಕೆಲ ಗಂಟೆಗಳ ಕಾಲ ಬಾಳೆಹೊನ್ನೂರು ಜಯಪುರ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಂದಾಯ, ಪೊಲೀಸ್ ಇಲಾಖೆ ಸಿಬ್ಬಂದಿ ಅಪಾಯ ಆಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು:</strong> ಪಟ್ಟಣದ ಸುತ್ತಮುತ್ತ ಕಳೆದ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಅಪಾಯದ ಮಟ್ಟದಲ್ಲಿ ಭದ್ರಾ ನದಿ ತುಂಬಿ ಹರಿಯುತ್ತಿದ್ದು ಜನ ಜೀವನ ಆಸ್ತವ್ಯಸ್ತಗೊಂಡಿದೆ.<br /> <br /> ಪಟ್ಟಣದ ಸಮೀಪದ ಭೈರೆಗುಡ್ಡ ಹೊಳೆಬಾಗಿಲು ಎಂಬಲ್ಲಿ ನದಿಯ ಪ್ರವಾಹ ಐದು ಮನೆಗಳಿಗೆ ನುಗ್ಗುವ ಭೀತಿಯ ಹಿನ್ನೆಲೆಯಲ್ಲಿ ನರಸಿಂಹರಾಜಪುರದ ತಹಶೀಲ್ದಾರ್ ಕೃಷ್ಣಮೂರ್ತಿ, ಠಾಣಾಧಿಕಾರಿ ಟಿ.ಎಸ್.ಮಧು, ಉಪ ತಹಶೀಲ್ದಾರ್ ಮೋಹನ್, ಗ್ರಾಮ ಲೆಕ್ಕಿಗ ಸೋಮಶೇಖರ್ ಸ್ಥಳಕ್ಕೆ ಭೇಟಿ ನೀಡಿ ಅವರನ್ನು ತಕ್ಷಣ ತೆರವುಗೊಳಿಸುವಂತೆ ಸೂಚಿಸಿದರು.<br /> <br /> ಚಿಕ್ಕಮಗಳೂರು-ಬಾಳೆಹೊನ್ನೂರು ಸಂಪರ್ಕ ಕಲ್ಪಿಸುವ ಭದ್ರಾ ಸೇತುವೆ ಸುತ್ತಮುತ್ತಲಿನ ಗದ್ದೆ ಮತ್ತುಅಡಿಕೆ ತೋಟಗಳಿಗೆ ಭದ್ರಾ ನದಿಯ ನೀರು ತುಂಬಿದ್ದು ಪ್ರವಾಹದ ಭೀತಿ ಎದುರಾಗಿದೆ.<br /> <br /> ಮಳೆಯ ಪರಿಣಾಮ ಕಡ್ಲೆಮಕ್ಕಿ ಸಮೀಪದ ಕೃಷ್ಣಾಚಾರ್ ಎಂಬುವವರ ಮನೆಯ ಗೋಡೆ ಕುಸಿದು ಬ್ದ್ದಿದು ಹಾನಿ ಸಂಭವಿಸಿದೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದರು. ಬುಧವಾರವೂ ಕೂಡ ಬಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬಾಳೆಹೊನ್ನೂರು -ಕಳಸ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗ ಕ್ಕೆ ನೀರು ನುಗ್ಗಿ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಹೆಚ್ಚಿದೆ.<br /> <br /> ಸೀಗೋಡು ಕೆರೆ ಸಮೀಪ ಮರ ರಸ್ತೆಗೆ ಉರುಳಿದ ಪರಿಣಾಮ ಕೆಲ ಗಂಟೆಗಳ ಕಾಲ ಬಾಳೆಹೊನ್ನೂರು ಜಯಪುರ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಂದಾಯ, ಪೊಲೀಸ್ ಇಲಾಖೆ ಸಿಬ್ಬಂದಿ ಅಪಾಯ ಆಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>