ಚಿಕ್ಕಮಗಳೂರು: ಮಾರ್ಚ್ 23ರಿಂದ ಏಪ್ರಿಲ್ 6 ರವೆರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ಮೂಲಸೌಕರ್ಯ ಒದಗಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಸೂಚಿಸಿದರು.
ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 14,592 ಪರೀಕ್ಷಾರ್ಥಿಗಳು ಇದ್ದಾರೆ. 58 ಪರೀಕ್ಷಾ ಕೇಂದ್ರಗಳಿವೆ. ಕುಡಿಯುವ ನೀರು, ಆಸನ, ಮೂಲಸೌಕರ್ಯ ಒದಗಿಸಬೇಕು ಎಂದರು.
ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮೆರಾ ಕಾರ್ಯನಿರ್ವಹಣೆ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು. ಪರೀಕ್ಷಾ ದಿನಗಳಂದು ಕೇಂದ್ರದ ಸಮೀಪದ ಜೆರಾಕ್ಸ್ ಅಂಗಡಿಗಳನ್ನು ತೆರೆಯದಂತೆ ಸೂಚಿಸಬೇಕು. ಪರೀಕ್ಷಾ ಕೇಂದ್ರದೊಳಕ್ಕೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಒಯ್ಯುವಂತಿಲ್ಲ ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರಸನ್ನಕುಮಾರ್ ಇದ್ದರು.