<p><strong>ಕಡೂರು: </strong>ಕಾಗಿನೆಲೆಯಿಂದ ಆರಂಭಗೊಂಡ ಕನಕ ಸದ್ಭಾವನಾ ಜ್ಯೋತಿ ರಥಯಾತ್ರೆ ಗುರುವಾರ ಕಡೂರು ಪಟ್ಟಣಕ್ಕೆ ಬಂದ ಸಂದರ್ಭದಲ್ಲಿ ಚಂದ್ರಮೌಳೇಶ್ವರ ದೇವಾಲಯದ ಬಳಿ ತಾಲ್ಲೂಕು ಕುರುಬ ಸಮಾಜದ ಮುಖಂಡರು ಭಕ್ತಿಯಿಂದ ಸ್ವಾಗತಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ರಥಯಾತ್ರೆಯ ಸಂಸ್ಥಾಪಕ ಓಂ ಕೃಷ್ಣಮೂರ್ತಿ, ‘ಕನಕದಾಸರು ನಮ್ಮ ಭಾರತ ಕಂಡ ಮಹಾನ್ ಚೇತನ. ಅವರ ಸ್ಮರಣೆಯಲ್ಲಿ ಪ್ರತಿವರ್ಷವು ಈ ಕನಕ ಸದ್ಭಾವನಾ ಯಾತ್ರೆಯನ್ನು ಆಯೋಜಿಸಲಾಗುತ್ತದೆ. ಸರ್ವಧರ್ಮಿಯರು ಈ ರಥಯಾತ್ರೆಯಲ್ಲಿ ಭಾಗವಹಿಸುವುದು ಸಂತಸ ತಂದಿದೆ’ ಎಂದರು.</p>.<p>ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ ಕೆ.ಎಚ್.ಎ. ಪ್ರಸನ್ನ ಮಾತನಾಡಿ, ‘ರಥಯಾತ್ರೆ ಕಡೂರು ಪಟ್ಟಣದಲ್ಲಿ ವಾಸ್ತವ್ಯ ಮಾಡಲಿದ್ದು, ದಾಸ ಸಾಹಿತ್ಯದಲ್ಲಿ ಅತ್ಯಂತ ಹೆಚ್ಚಿನ ಸಾಧನೆ ಮಾಡಿ ನಮ್ಮೆಲ್ಲರಿಗೂ ಆದರ್ಶಪ್ರಾಯರಾದ ಕನಕದಾಸರ ಸ್ಮರಣೆ ಮಾಡುವುದು ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ. ಆ ಮಹಾನ್ ಚೇತನ ಪ್ರತಿಯೊಬ್ಬರಿಗೂ ಸೇರಿದವರು’ ಎಂದು ನುಡಿದರು.</p>.<p>ರಥಯಾತ್ರೆಯಲ್ಲಿ 530ನೇ ಕನಕ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ವೈ.ಎಸ್. ತಿಪ್ಪೇಶ್, ಸಮಾಜದ ಮುಖಂಡರಾದ ಭಂಡಾರಿ ಶ್ರೀನಿವಾಸ್, ಹೂವಿನಗೋವಿಂದಪ್ಪ, ಮಾಜಿ ಅಧ್ಯಕ್ಷ ಕೆ.ಎಸ್. ರಮೇಶ್, ಕೆ.ಎಸ್. ಆನಂದ್, ಸಾವಿತ್ರಿಗಂಗಣ್ಣ, ಹಾಲಪ್ಪ, ಕೆ.ಎಚ್. ರಂಗನಾಥ್ , ಕದಂಬ ವೆಂಕಟೇಶ್, ಎನ್.ಹೆಚ್. ನಂಜುಂಡಸ್ವಾಮಿ, ಸಾವಿತ್ರಿ ಗಂಗಣ್ಣ, ಕೆ.ಜಿ. ಶ್ರೀನಿವಾಸ್ ಮೂರ್ತಿ, ಎಂ. ಸೋಮಶೇಖರ್, ಯರದಕೆರೆ ರಾಜಣ್ಣ, ಕೆ.ಜಿ. ಲೋಕೇಶ್ವರ್, ಡಿಶ್ ಮಂಜಣ್ಣ, ರವಿ ಇದ್ದರು.</p>.<p>ಜ್ಯೋತಿ ರಥಯಾತ್ರೆಯು ಪಟ್ಟಣದ ಚಂದ್ರಮೌಳೇಶ್ವರ ದೇವಾಲಯದಿಂದ ಡೊಳ್ಳುಕುಣಿತ ಕಲಾ ತಂಡದೊಂದಿಗೆ ಮೆರವಣಿಗೆ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಡೂರು: </strong>ಕಾಗಿನೆಲೆಯಿಂದ ಆರಂಭಗೊಂಡ ಕನಕ ಸದ್ಭಾವನಾ ಜ್ಯೋತಿ ರಥಯಾತ್ರೆ ಗುರುವಾರ ಕಡೂರು ಪಟ್ಟಣಕ್ಕೆ ಬಂದ ಸಂದರ್ಭದಲ್ಲಿ ಚಂದ್ರಮೌಳೇಶ್ವರ ದೇವಾಲಯದ ಬಳಿ ತಾಲ್ಲೂಕು ಕುರುಬ ಸಮಾಜದ ಮುಖಂಡರು ಭಕ್ತಿಯಿಂದ ಸ್ವಾಗತಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ರಥಯಾತ್ರೆಯ ಸಂಸ್ಥಾಪಕ ಓಂ ಕೃಷ್ಣಮೂರ್ತಿ, ‘ಕನಕದಾಸರು ನಮ್ಮ ಭಾರತ ಕಂಡ ಮಹಾನ್ ಚೇತನ. ಅವರ ಸ್ಮರಣೆಯಲ್ಲಿ ಪ್ರತಿವರ್ಷವು ಈ ಕನಕ ಸದ್ಭಾವನಾ ಯಾತ್ರೆಯನ್ನು ಆಯೋಜಿಸಲಾಗುತ್ತದೆ. ಸರ್ವಧರ್ಮಿಯರು ಈ ರಥಯಾತ್ರೆಯಲ್ಲಿ ಭಾಗವಹಿಸುವುದು ಸಂತಸ ತಂದಿದೆ’ ಎಂದರು.</p>.<p>ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ ಕೆ.ಎಚ್.ಎ. ಪ್ರಸನ್ನ ಮಾತನಾಡಿ, ‘ರಥಯಾತ್ರೆ ಕಡೂರು ಪಟ್ಟಣದಲ್ಲಿ ವಾಸ್ತವ್ಯ ಮಾಡಲಿದ್ದು, ದಾಸ ಸಾಹಿತ್ಯದಲ್ಲಿ ಅತ್ಯಂತ ಹೆಚ್ಚಿನ ಸಾಧನೆ ಮಾಡಿ ನಮ್ಮೆಲ್ಲರಿಗೂ ಆದರ್ಶಪ್ರಾಯರಾದ ಕನಕದಾಸರ ಸ್ಮರಣೆ ಮಾಡುವುದು ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ. ಆ ಮಹಾನ್ ಚೇತನ ಪ್ರತಿಯೊಬ್ಬರಿಗೂ ಸೇರಿದವರು’ ಎಂದು ನುಡಿದರು.</p>.<p>ರಥಯಾತ್ರೆಯಲ್ಲಿ 530ನೇ ಕನಕ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ವೈ.ಎಸ್. ತಿಪ್ಪೇಶ್, ಸಮಾಜದ ಮುಖಂಡರಾದ ಭಂಡಾರಿ ಶ್ರೀನಿವಾಸ್, ಹೂವಿನಗೋವಿಂದಪ್ಪ, ಮಾಜಿ ಅಧ್ಯಕ್ಷ ಕೆ.ಎಸ್. ರಮೇಶ್, ಕೆ.ಎಸ್. ಆನಂದ್, ಸಾವಿತ್ರಿಗಂಗಣ್ಣ, ಹಾಲಪ್ಪ, ಕೆ.ಎಚ್. ರಂಗನಾಥ್ , ಕದಂಬ ವೆಂಕಟೇಶ್, ಎನ್.ಹೆಚ್. ನಂಜುಂಡಸ್ವಾಮಿ, ಸಾವಿತ್ರಿ ಗಂಗಣ್ಣ, ಕೆ.ಜಿ. ಶ್ರೀನಿವಾಸ್ ಮೂರ್ತಿ, ಎಂ. ಸೋಮಶೇಖರ್, ಯರದಕೆರೆ ರಾಜಣ್ಣ, ಕೆ.ಜಿ. ಲೋಕೇಶ್ವರ್, ಡಿಶ್ ಮಂಜಣ್ಣ, ರವಿ ಇದ್ದರು.</p>.<p>ಜ್ಯೋತಿ ರಥಯಾತ್ರೆಯು ಪಟ್ಟಣದ ಚಂದ್ರಮೌಳೇಶ್ವರ ದೇವಾಲಯದಿಂದ ಡೊಳ್ಳುಕುಣಿತ ಕಲಾ ತಂಡದೊಂದಿಗೆ ಮೆರವಣಿಗೆ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>