ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರಿ ಮಾದರಿ ವೇತನ ನೀಡಿ

Last Updated 11 ಫೆಬ್ರುವರಿ 2011, 9:45 IST
ಅಕ್ಷರ ಗಾತ್ರ

ತರೀಕೆರೆ: ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ವೇತನ ಮತ್ತು ಭತ್ಯೆ ನೀಡಬೇಕು ಎಂದು ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ನಾಗರಾಜ್ ಒತ್ತಾಯಿಸಿದರು.ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದ ಅವರು, 2001ರ ಜನಗಣತಿಯ ಆಧಾರದ ಮೇಲೆ ಜಿಲ್ಲಾ ಮತ್ತು ತಾಲ್ಲೂಕುಗಳನ್ನು ಪುನರ್ ವಿಂಗಡಿಸಿ ಮನೆ ಬಾಡಿಗೆ ಭತ್ಯೆ ಮತ್ತು ಇತರೆ ಸೌಲಭ್ಯವನ್ನು ನೀಡುವಂತೆ ಮನವಿ ಮಾಡಿದರು.

ಪ್ರಧಾನ ಕಾರ್ಯದರ್ಶಿ ಟೀಕೇಶ್ವರ್ ಮಾತನಾಡಿ, 2006ರಿಂದ ರಾಜ್ಯ ಸರ್ಕಾರಿ ನೌಕರರಿಗೆ ಉಂಟಾಗಿರುವ ಆರ್ಥಿಕ ನಷ್ಟ ಭರಿಸಲು ಮತ್ತು ಕೇಂದ್ರ,ರಾಜ್ಯ ಸರ್ಕಾರಿ ನೌಕರರ ನಡುವಿನ ವೇತನ ಭತ್ಯೆ ವ್ಯತ್ಯಾಸ ಸರಿದೂಗಿಸಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮಾದರಿಯಲ್ಲಿ 2006ರಿಂದ ಅನ್ವಯಿಸುವಂತೆ ವೇತನ ಭತ್ಯೆ ಪ್ರಕಟಿಸಬೇಕು ಎಂದು ಮನವಿ ಮಾಡಿದರು.
ಅರಣ್ಯ ಇಲಾಖೆಯಲ್ಲಿ ಕಳೆದ 20ವರ್ಷದಿಂದ ದಿನಗೂಲಿ ನೌಕರರಾಗಿ ದುಡಿಯುತ್ತಿರುವ ನೌಕರರು ಯಾವುದೇ ಸೇವಾ ಭದ್ರತೆಯಿಲ್ಲದೆ ಪರಿತಪಿಸುತ್ತಿದ್ದಾರೆ ಸರ್ಕಾರ ಕೂಡಲೆ ಅವರ ನೆರವಿಗೆ ಬರಬೇಕೆಂದು ಅವರು ಮನವಿ ಮಾಡಿದರು.

ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಟಿ.ಟಿ.ಗೋವಿಂದಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಇ.ಎಸ್.ನಾಗರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಇ. ಉಮೇಶ್, ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ನಾಗರಾಜ್ ಪದಾಧಿಕಾರಿಗಳಾದ ಸೇವ್ಯಾನಾಯ್ಕ, ಎಸ್,ವಿ.ನಾಗರಾಜ್, ಎನ್. ಎಸ್.ನಿಜಗುಣ, ಎಸ್.ಎಚ್.ಲೋಕೇಶ್ ಮತ್ತು ಇತರರು ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT