ಚಿಕ್ಕಮಗಳೂರು: ನಗರದಲ್ಲಿ ಶನಿವಾರ ದತ್ತ ಜಯಂತಿ ಶೋಭಾಯಾತ್ರೆ ಆರಂಭವಾಗಿದೆ. ಮೆರವಣಿಗೆಯಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದ್ದು, ಪ್ರಮುಖ ವೃತ್ತಗಳಲ್ಲಿ ಕೇಸರಿ ಧ್ವಜಗಳಿಂದ ಸಿಂಗರಿಸಿರುವುದರಿಂದ ನಗರ ಕೇಸರಿ ಮಯವಾಗಿದೆ.
ತುಂತುರು ಮಳೆ, ಮೋಡ ಕವಿದ ವಾತಾವರಣ, ಚುಮುಚುಮು ಚಳಿಯಲ್ಲಿ ದತ್ತ ಭಕ್ತರ ಸಂಭ್ರಮ ಇದ್ದು, ಕೇಸರಿ ಧ್ವಜಗಳು ಹಾರಾಡುತ್ತಿವೆ.
ಶೋಭಾಯಾತ್ರೆ ಹನುಮಂತಪ್ಪ ವೃತ್ತದ ಮೂಲಕ ಸಾಗಿತು. ಮೆರವಣಿಗೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.