<p><strong>ಚಿಕ್ಕಮಗಳೂರು:</strong> ಬಿಜೆಪಿ ಯುವಮೋರ್ಚ ಹಮ್ಮಿಕೊಂಡಿದ್ದ ಶ್ರೀನಗರದಲ್ಲಿನ ತಿರಂಗ ಯಾತ್ರೆಗೆ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಮಾನವ ಸರಪಳಿ ನಿರ್ಮಿಸಿ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.<br /> <br /> ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆ ನಡೆಸಿದ ಕೆಲವು ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. <br /> ಶ್ರೀನಗರದ ಲಾಲ್ಚೌಕ್ನಲ್ಲಿ ತ್ರಿವರ್ಣ ಧ್ವಜ ಹಾರಿಸಲು ವಿಶೇಷ ರೈಲಿನಲ್ಲಿ ತೆರಳುತ್ತಿದ್ದವರನ್ನು ಮಹಾರಾಷ್ಟ್ರ ಸರ್ಕಾರ ತಡೆದು ಹಿಂದಕ್ಕೆ ಕಳುಹಿಸಿದೆ. ಈಗ ಪಕ್ಷದ ರಾಷ್ಟ್ರೀಯ ಮುಖಂಡರನ್ನು ಬಂಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಪ್ರತಿಭಟನಾಕಾರರು ಖಂಡಿಸಿದರು.<br /> <br /> ನಗರದ ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ್ದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಬಿಜೆಪಿ ಜಿಲ್ಲಾ ಘಟಕ ಕಾರ್ಯದರ್ಶಿ ವರಸಿದ್ದಿ ವೇಣುಗೋಪಾಲ್, ನಗರಸಭಾ ಸದಸ್ಯರಾದ ಮಂಜುನಾಥ, ಮುತ್ತಯ್ಯ, ರಾಘವೇಲು, ನಟರಾಜ್ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.<br /> <br /> ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರ(ಸಿಡಿಎ) ಅಧ್ಯಕ್ಷ ಶ್ರೀಕಾಂತ್ಪೈ, ಮಾಜಿ ಅಧ್ಯಕ್ಷ ರಂಗನಾಥ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮ್ ಕುಮಾರ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಬಿಜೆಪಿ ಯುವಮೋರ್ಚ ಹಮ್ಮಿಕೊಂಡಿದ್ದ ಶ್ರೀನಗರದಲ್ಲಿನ ತಿರಂಗ ಯಾತ್ರೆಗೆ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಮಾನವ ಸರಪಳಿ ನಿರ್ಮಿಸಿ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.<br /> <br /> ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಸರ್ಕಾರ ವಿರುದ್ಧ ಘೋಷಣೆ ಕೂಗಿ ರಸ್ತೆ ತಡೆ ನಡೆಸಿದ ಕೆಲವು ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. <br /> ಶ್ರೀನಗರದ ಲಾಲ್ಚೌಕ್ನಲ್ಲಿ ತ್ರಿವರ್ಣ ಧ್ವಜ ಹಾರಿಸಲು ವಿಶೇಷ ರೈಲಿನಲ್ಲಿ ತೆರಳುತ್ತಿದ್ದವರನ್ನು ಮಹಾರಾಷ್ಟ್ರ ಸರ್ಕಾರ ತಡೆದು ಹಿಂದಕ್ಕೆ ಕಳುಹಿಸಿದೆ. ಈಗ ಪಕ್ಷದ ರಾಷ್ಟ್ರೀಯ ಮುಖಂಡರನ್ನು ಬಂಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಪ್ರತಿಭಟನಾಕಾರರು ಖಂಡಿಸಿದರು.<br /> <br /> ನಗರದ ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ್ದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಬಿಜೆಪಿ ಜಿಲ್ಲಾ ಘಟಕ ಕಾರ್ಯದರ್ಶಿ ವರಸಿದ್ದಿ ವೇಣುಗೋಪಾಲ್, ನಗರಸಭಾ ಸದಸ್ಯರಾದ ಮಂಜುನಾಥ, ಮುತ್ತಯ್ಯ, ರಾಘವೇಲು, ನಟರಾಜ್ ಸೇರಿದಂತೆ ಏಳು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.<br /> <br /> ಚಿಕ್ಕಮಗಳೂರು ಅಭಿವೃದ್ಧಿ ಪ್ರಾಧಿಕಾರ(ಸಿಡಿಎ) ಅಧ್ಯಕ್ಷ ಶ್ರೀಕಾಂತ್ಪೈ, ಮಾಜಿ ಅಧ್ಯಕ್ಷ ರಂಗನಾಥ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮ್ ಕುಮಾರ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>