<p>ಚಿಕ್ಕಮಗಳೂರು: ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಿ.ಎಚ್.ಶಂಕರಮೂರ್ತಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಬುಧವಾರ ರಾತ್ರಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.<br /> <br /> ನಗರದ ಹನುಮಂತಂಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ, ಪಕ್ಷದ ಪರ ಜಯಘೋಷ ಕೂಗಿ ಕುಪ್ಪಳಿಸಿದರು. ಪಕ್ಷದ ಜಿಲ್ಲಾ ವಕ್ತಾರ ರಾಜಪ್ಪ, ಮುಖಂಡರಾದ ಕೋಟೆ ರಂಗನಾಥ, ಶ್ರೀನಿವಾಸ, ಕುರೇಶಿ ಇನ್ನಿತರರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.<br /> <br /> <strong>ಪ್ರಜ್ಞಾವಂತರು ಕೈಬಿಡಲಿಲ್ಲ:</strong> `ಈ ಗೆಲುವು ಪ್ರಜ್ಞಾವಂತ ಮತ್ತು ಸುಶಿಕ್ಷಿತ ಮತದಾರರು ಬಿಜೆಪಿಯನ್ನು ಕೈಬಿಟ್ಟಿಲ್ಲ ಎನ್ನುವುದರ ಸೂಚಕ. ಸುಶಿಕ್ಷಿತ ಮತದಾರರು ಉತ್ತಮ ವ್ಯಕ್ತಿತ್ವದ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಿದ್ದಾರೆ. <br /> <br /> ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರು ಮತ್ತು ಅಭ್ಯರ್ಥಿ ಗಳನ್ನು ಬೆಂಬಲಿಸಿದ ಮತದಾರರಿಗೆ ಪಕ್ಷ ಕೃತಜ್ಞವಾಗಿದೆ. ಕಷ್ಟ ಕಾಲದಲ್ಲೂ ದೊರೆತಿರುವ ಗೆಲುವು ಪಕ್ಷವನ್ನು ಇನ್ನಷ್ಟು ಸದೃಢಗೊಳಿಸಲು ಸ್ಫೂರ್ತಿ ನೀಡಿದೆ~ ಎಂದು ಬಿಜೆಪಿ ರಾಜ್ಯ ಪ್ರಧಾನಕಾಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಿ.ಎಚ್.ಶಂಕರಮೂರ್ತಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಬುಧವಾರ ರಾತ್ರಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.<br /> <br /> ನಗರದ ಹನುಮಂತಂಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ, ಪಕ್ಷದ ಪರ ಜಯಘೋಷ ಕೂಗಿ ಕುಪ್ಪಳಿಸಿದರು. ಪಕ್ಷದ ಜಿಲ್ಲಾ ವಕ್ತಾರ ರಾಜಪ್ಪ, ಮುಖಂಡರಾದ ಕೋಟೆ ರಂಗನಾಥ, ಶ್ರೀನಿವಾಸ, ಕುರೇಶಿ ಇನ್ನಿತರರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.<br /> <br /> <strong>ಪ್ರಜ್ಞಾವಂತರು ಕೈಬಿಡಲಿಲ್ಲ:</strong> `ಈ ಗೆಲುವು ಪ್ರಜ್ಞಾವಂತ ಮತ್ತು ಸುಶಿಕ್ಷಿತ ಮತದಾರರು ಬಿಜೆಪಿಯನ್ನು ಕೈಬಿಟ್ಟಿಲ್ಲ ಎನ್ನುವುದರ ಸೂಚಕ. ಸುಶಿಕ್ಷಿತ ಮತದಾರರು ಉತ್ತಮ ವ್ಯಕ್ತಿತ್ವದ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಿದ್ದಾರೆ. <br /> <br /> ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರು ಮತ್ತು ಅಭ್ಯರ್ಥಿ ಗಳನ್ನು ಬೆಂಬಲಿಸಿದ ಮತದಾರರಿಗೆ ಪಕ್ಷ ಕೃತಜ್ಞವಾಗಿದೆ. ಕಷ್ಟ ಕಾಲದಲ್ಲೂ ದೊರೆತಿರುವ ಗೆಲುವು ಪಕ್ಷವನ್ನು ಇನ್ನಷ್ಟು ಸದೃಢಗೊಳಿಸಲು ಸ್ಫೂರ್ತಿ ನೀಡಿದೆ~ ಎಂದು ಬಿಜೆಪಿ ರಾಜ್ಯ ಪ್ರಧಾನಕಾಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>