<p><strong>ಕಳಸ</strong>: ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಾ ಅನೇಕ ಅಕ್ರಮಗಳನ್ನು ಎಸಗುತ್ತಿದ್ದಾರೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ತಾಲ್ಲೂಕು ಕಚೇರಿಯ ಮುಂದೆ ಧರಣಿ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯೆ ಮೋಟಮ್ಮ ಹೇಳಿದರು.<br /> <br /> ಕಳಸ ಹೋಬಳಿಯಲ್ಲಿ ಬಿಜೆಪಿ ಬೆಂಬಲಿಗರು ಅಕ್ರಮ ಸಕ್ರಮ ಯೋಜನೆಯಲ್ಲಿ ಫಾರಂ ನಂಬರ್ 53ರಲ್ಲಿ ಅಕ್ರಮವಾಗಿ ಕೃಷಿ ಭೂಮಿಗೆ ಮಂಜೂರಾತಿ ಪಡೆದಿದ್ದಾರೆ. ಈ ಪ್ರಕ್ರಿಯೆಯಲ್ಲಿ ಎಕರೆಗೆ 50-75 ಸಾವಿರ ರೂಪಾಯಿ ಲಂಚವನ್ನೂ ನೀಡಲಾಗಿದೆ. <br /> </p>.<p>ಈಗಾಗಲೇ ಭೂಮಿ ಹೊಂದಿದ್ದವರಿಗೂ ಮತ್ತು ಅನೇಕ ವರ್ಷಗಳ ಹಿಂದೆ ಭೂಮಿ ಮಂಜೂರಾದವರಿಗೂ ಮತ್ತೆ ಭೂಮಿ ಮಂಜೂರಾಗಿದೆ ಎಂದು ತಾ.ಪಂ. ಮಾಜಿ ಸದಸ್ಯ ಕೆ.ಸಿ.ಧರಣೇಂದ್ರ ಆರೋಪಿಸಿದಾಗ ಮೋಟಮ್ಮ ಮೇಲಿನ ಸಲಹೆ ನೀಡಿದರು.<br /> <br /> `ಮತದಾರರ ಜೊತೆ ಮಾತುಕತೆ~ ಕಾರ್ಯಕ್ರಮದಲ್ಲಿ ಹಣಕ್ಕಾಗಿ ಮತ ಹಾಕದಂತೆ ಜನರ ಮನವೊಲಿಸಬೇಕಾಗಿದೆ. ಜೊತೆಗೆ ಭ್ರಷ್ಟರು, ಸ್ವಜನಪಕ್ಷಪಾತಿಗಳು ಎಂದಿಗೂ ಚುನಾ ವಣೆಯಲ್ಲಿ ಗೆಲ್ಲದಂತೆ ಜಾಗೃತ ಮತದಾನ ಮಾಡುವಂತೆ ಮತದಾರರಲ್ಲಿ ಮನವಿ ಮಾಡಬೇಕಾಗಿದೆ ಎಂದು ಅವರು ಹೇಳಿದರು.<br /> <br /> ಕಳಸ ಹೋಬಳಿಯ ರಸ್ತೆಗಳ ಸ್ಥಿತಿ ಹದಗೆಟ್ಟಿದೆ ಮತ್ತು ಕಳೆದ ಮೂರು ವರ್ಷದಿಂದ ಯಾವುದೇ ವಸತಿ ಯೋಜನೆಯಲ್ಲಿ ಮನೆ ಬಿಡುಗಡೆಯಾಗಿಲ್ಲ ಎಂದು ಕೆ.ಸಿ.ಧರಣೇಂದ್ರ ಗಮನ ಸೆಳೆದರು. ಹಂತಹಂತವಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದು ಎನ್.ಎಂ.ಹರ್ಷ ಅಭಿಪ್ರಾಯಪಟ್ಟರು.<br /> <br /> ರಾಜ್ಯ ಸಭೆ ಮಾಜಿ ಸದಸ್ಯೆ ಬಿಂಬಾರಾಯ್ಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಭಾಕರ್, ಹೋಬಳಿ ಅಧ್ಯಕ್ಷ ವರ್ಧಮಾನಯ್ಯ, ಮುಖಂಡ ರಾದ ಮಾರ್ಟಿನ್ ಡಿಸೋಜ, ಶುಕೂರ್, ಫಾತಿಮಾ ರೆಹಮಾನ್, ಉಮಾದೇವಿ, ರಾಮಚಂದ್ರಯ್ಯ, ಗ್ರಾ.ಪಂ. ಸದಸ್ಯರಾದ ಅನಿಲ್ ಡಿಸೋಜ, ಶಾಹುಲ್, ರತ್ನಮ್ಮ ಶೆಟ್ಟಿ, ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ</strong>: ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಾ ಅನೇಕ ಅಕ್ರಮಗಳನ್ನು ಎಸಗುತ್ತಿದ್ದಾರೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ತಾಲ್ಲೂಕು ಕಚೇರಿಯ ಮುಂದೆ ಧರಣಿ ನಡೆಸಬೇಕು ಎಂದು ವಿಧಾನಪರಿಷತ್ ಸದಸ್ಯೆ ಮೋಟಮ್ಮ ಹೇಳಿದರು.<br /> <br /> ಕಳಸ ಹೋಬಳಿಯಲ್ಲಿ ಬಿಜೆಪಿ ಬೆಂಬಲಿಗರು ಅಕ್ರಮ ಸಕ್ರಮ ಯೋಜನೆಯಲ್ಲಿ ಫಾರಂ ನಂಬರ್ 53ರಲ್ಲಿ ಅಕ್ರಮವಾಗಿ ಕೃಷಿ ಭೂಮಿಗೆ ಮಂಜೂರಾತಿ ಪಡೆದಿದ್ದಾರೆ. ಈ ಪ್ರಕ್ರಿಯೆಯಲ್ಲಿ ಎಕರೆಗೆ 50-75 ಸಾವಿರ ರೂಪಾಯಿ ಲಂಚವನ್ನೂ ನೀಡಲಾಗಿದೆ. <br /> </p>.<p>ಈಗಾಗಲೇ ಭೂಮಿ ಹೊಂದಿದ್ದವರಿಗೂ ಮತ್ತು ಅನೇಕ ವರ್ಷಗಳ ಹಿಂದೆ ಭೂಮಿ ಮಂಜೂರಾದವರಿಗೂ ಮತ್ತೆ ಭೂಮಿ ಮಂಜೂರಾಗಿದೆ ಎಂದು ತಾ.ಪಂ. ಮಾಜಿ ಸದಸ್ಯ ಕೆ.ಸಿ.ಧರಣೇಂದ್ರ ಆರೋಪಿಸಿದಾಗ ಮೋಟಮ್ಮ ಮೇಲಿನ ಸಲಹೆ ನೀಡಿದರು.<br /> <br /> `ಮತದಾರರ ಜೊತೆ ಮಾತುಕತೆ~ ಕಾರ್ಯಕ್ರಮದಲ್ಲಿ ಹಣಕ್ಕಾಗಿ ಮತ ಹಾಕದಂತೆ ಜನರ ಮನವೊಲಿಸಬೇಕಾಗಿದೆ. ಜೊತೆಗೆ ಭ್ರಷ್ಟರು, ಸ್ವಜನಪಕ್ಷಪಾತಿಗಳು ಎಂದಿಗೂ ಚುನಾ ವಣೆಯಲ್ಲಿ ಗೆಲ್ಲದಂತೆ ಜಾಗೃತ ಮತದಾನ ಮಾಡುವಂತೆ ಮತದಾರರಲ್ಲಿ ಮನವಿ ಮಾಡಬೇಕಾಗಿದೆ ಎಂದು ಅವರು ಹೇಳಿದರು.<br /> <br /> ಕಳಸ ಹೋಬಳಿಯ ರಸ್ತೆಗಳ ಸ್ಥಿತಿ ಹದಗೆಟ್ಟಿದೆ ಮತ್ತು ಕಳೆದ ಮೂರು ವರ್ಷದಿಂದ ಯಾವುದೇ ವಸತಿ ಯೋಜನೆಯಲ್ಲಿ ಮನೆ ಬಿಡುಗಡೆಯಾಗಿಲ್ಲ ಎಂದು ಕೆ.ಸಿ.ಧರಣೇಂದ್ರ ಗಮನ ಸೆಳೆದರು. ಹಂತಹಂತವಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದು ಎನ್.ಎಂ.ಹರ್ಷ ಅಭಿಪ್ರಾಯಪಟ್ಟರು.<br /> <br /> ರಾಜ್ಯ ಸಭೆ ಮಾಜಿ ಸದಸ್ಯೆ ಬಿಂಬಾರಾಯ್ಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಭಾಕರ್, ಹೋಬಳಿ ಅಧ್ಯಕ್ಷ ವರ್ಧಮಾನಯ್ಯ, ಮುಖಂಡ ರಾದ ಮಾರ್ಟಿನ್ ಡಿಸೋಜ, ಶುಕೂರ್, ಫಾತಿಮಾ ರೆಹಮಾನ್, ಉಮಾದೇವಿ, ರಾಮಚಂದ್ರಯ್ಯ, ಗ್ರಾ.ಪಂ. ಸದಸ್ಯರಾದ ಅನಿಲ್ ಡಿಸೋಜ, ಶಾಹುಲ್, ರತ್ನಮ್ಮ ಶೆಟ್ಟಿ, ಸಂತೋಷ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>