<p><strong>ಕೆ.ಹೊಸೂರು (ತರೀಕೆರೆ): </strong>ಭದ್ರಾ ಮೇಲ್ದಂಡೆ ಯೋಜನೆ ತಾಲ್ಲೂಕಿನಲ್ಲಿ ಪ್ರಾರಂಭವಾಗಿ ವರ್ಷ ಕಳೆದರೂ ಯೋಜನೆ ಅಧಿಕಾರಿಗಳು ಸಂಕಷ್ಟದಲ್ಲಿರುವ ರೈತರನ್ನು ಭೇಟಿ ಮಾಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಯೋಜನೆಯ ವ್ಯಾಪ್ತಿಯಲ್ಲಿ ಜಮೀನು ಕಳೆದುಕೊಳ್ಳುತ್ತಿರುವವರು ತಾಲ್ಲೂಕಿನ ಕೆ.ಹೊಸೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ರೈತರ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.<br /> <br /> ನಮ್ಮ ಕಷ್ಟಗಳನ್ನು ಕಣ್ಣಾರೆ ಕಾಣಲು ಸ್ಥಳಕ್ಕೆ ಬೇಟಿ ನೀಡುವಂತೆ ಹಲವು ಬಾರಿ ಮಾಡಿದ ಮನವಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಮತ್ತು ಯೋಜನೆ ಅನುಷ್ಟಾನ ವಿರುದ್ಧ ಸದ್ಯದಲ್ಲಿ ರೈಲು, ರಸ್ತೆತಡೆ ಚಳುವಳಿ ನಡೆಸಲು ಸಭೆಯಲ್ಲಿ ರೈತರು ನಿರ್ಣಯ ಕೈಗೊಂಡರು.<br /> <br /> ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯಲ್ಲಿ ಮಾತ್ರ ನೀರಾವರಿ ಸೌಲಭ್ಯವಿದ್ದು, ಭದ್ರಾನದಿಯಿಂದ ಎಲ್ಲಾ ಹೋಬಳಿಗಳಿಗೆ ಮೊದಲು ನೀರು ಕೊಟ್ಟು ನಂತರ ಇತರರಿಗೆ ನೀರುಕೊಡಿ ಎಂದು ಹೇಳಿದ ರೈತರು ಯಾವುದೇ ಕಾರಣಕ್ಕೂ ಯೋಜನೆ ಸಂಪೂರ್ಣವಾಗಿ ತಾಲ್ಲೂಕಿನಲ್ಲಿ ಜಾರಿಯಾಗಲು ಬಿಡುವುದಿಲ್ಲ ಎಂದರು. ಸಭೆಯಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಕುಮಾರ್ ಯೋಜನೆಗೆ ನಮ್ಮ ವಿರೋಧವಿಲ್ಲ, ಆದರೆ ಸರ್ಕಾರ ಅನಗತ್ಯವಾಗಿ ಸುರಂಗ ತೋಡುವುದಕ್ಕೆ ನಮ್ಮ ವಿರೋಧವಿದೆ ಎಂದರು.<br /> <br /> ರೈತರ ಪರ ಮಾತನಾಡಿದ ಖಾಸಗಿ ಕಂಪನಿಯೊದರ ಎಂಜಿನಿಯರ್ ನೀಲಕಂಠ, ಯೋಜನೆಗೆ ತಮ್ಮ ಜಮೀನು ಕಳೆದುಕೊಳ್ಳುತ್ತಿರುವ ರೈತರು ತಾವೇ ಹೋರಾಡಬೇಕಾದ ಸ್ಥಿತಿ ಬಂದಿದೆ. ಜನಪ್ರತಿನಿಧಿಗಳು ಜನ ನಾಯಕರು ಕೇವಲ ರೈತರ ಕಣ್ಣೊರೆಸುವ ನಾಟಕವನ್ನಾಡುತ್ತಿದ್ದಾರೆ ಎಂದರು.<br /> <br /> ತಾಲ್ಲೂಕಿನಲ್ಲಿ ಯೋಜನೆಯ ಕಾಲುವೆ ಬರುವ ಮಾರ್ಗದ ಗ್ರಾಮಗಳಾದ ಹಳಿಯೂರು, ಸೊಕ್ಕೆ, ಚಾಕೋನಹಳ್ಳಿ, ಇಂದಾವರ, ಅಟತ್ತಿಗನಾಳು, ಬೀರಾಪುರ, ಚನ್ನಾಪುರ, ದ್ಯಾಮಾಪುರ, ಕಲ್ಲುಶೆಟ್ಟಿಹಳ್ಳಿ, ಜೋಡಿ ಗೋವಿಂದಪುರ, ಸಮತಳ ಗ್ರಾಮ ಸೇರಿದಂತೆ ನೂರಾರು ರೈತರು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಹೊಸೂರು (ತರೀಕೆರೆ): </strong>ಭದ್ರಾ ಮೇಲ್ದಂಡೆ ಯೋಜನೆ ತಾಲ್ಲೂಕಿನಲ್ಲಿ ಪ್ರಾರಂಭವಾಗಿ ವರ್ಷ ಕಳೆದರೂ ಯೋಜನೆ ಅಧಿಕಾರಿಗಳು ಸಂಕಷ್ಟದಲ್ಲಿರುವ ರೈತರನ್ನು ಭೇಟಿ ಮಾಡಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ಯೋಜನೆಯ ವ್ಯಾಪ್ತಿಯಲ್ಲಿ ಜಮೀನು ಕಳೆದುಕೊಳ್ಳುತ್ತಿರುವವರು ತಾಲ್ಲೂಕಿನ ಕೆ.ಹೊಸೂರು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದ ರೈತರ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.<br /> <br /> ನಮ್ಮ ಕಷ್ಟಗಳನ್ನು ಕಣ್ಣಾರೆ ಕಾಣಲು ಸ್ಥಳಕ್ಕೆ ಬೇಟಿ ನೀಡುವಂತೆ ಹಲವು ಬಾರಿ ಮಾಡಿದ ಮನವಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಮತ್ತು ಯೋಜನೆ ಅನುಷ್ಟಾನ ವಿರುದ್ಧ ಸದ್ಯದಲ್ಲಿ ರೈಲು, ರಸ್ತೆತಡೆ ಚಳುವಳಿ ನಡೆಸಲು ಸಭೆಯಲ್ಲಿ ರೈತರು ನಿರ್ಣಯ ಕೈಗೊಂಡರು.<br /> <br /> ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯಲ್ಲಿ ಮಾತ್ರ ನೀರಾವರಿ ಸೌಲಭ್ಯವಿದ್ದು, ಭದ್ರಾನದಿಯಿಂದ ಎಲ್ಲಾ ಹೋಬಳಿಗಳಿಗೆ ಮೊದಲು ನೀರು ಕೊಟ್ಟು ನಂತರ ಇತರರಿಗೆ ನೀರುಕೊಡಿ ಎಂದು ಹೇಳಿದ ರೈತರು ಯಾವುದೇ ಕಾರಣಕ್ಕೂ ಯೋಜನೆ ಸಂಪೂರ್ಣವಾಗಿ ತಾಲ್ಲೂಕಿನಲ್ಲಿ ಜಾರಿಯಾಗಲು ಬಿಡುವುದಿಲ್ಲ ಎಂದರು. ಸಭೆಯಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಕುಮಾರ್ ಯೋಜನೆಗೆ ನಮ್ಮ ವಿರೋಧವಿಲ್ಲ, ಆದರೆ ಸರ್ಕಾರ ಅನಗತ್ಯವಾಗಿ ಸುರಂಗ ತೋಡುವುದಕ್ಕೆ ನಮ್ಮ ವಿರೋಧವಿದೆ ಎಂದರು.<br /> <br /> ರೈತರ ಪರ ಮಾತನಾಡಿದ ಖಾಸಗಿ ಕಂಪನಿಯೊದರ ಎಂಜಿನಿಯರ್ ನೀಲಕಂಠ, ಯೋಜನೆಗೆ ತಮ್ಮ ಜಮೀನು ಕಳೆದುಕೊಳ್ಳುತ್ತಿರುವ ರೈತರು ತಾವೇ ಹೋರಾಡಬೇಕಾದ ಸ್ಥಿತಿ ಬಂದಿದೆ. ಜನಪ್ರತಿನಿಧಿಗಳು ಜನ ನಾಯಕರು ಕೇವಲ ರೈತರ ಕಣ್ಣೊರೆಸುವ ನಾಟಕವನ್ನಾಡುತ್ತಿದ್ದಾರೆ ಎಂದರು.<br /> <br /> ತಾಲ್ಲೂಕಿನಲ್ಲಿ ಯೋಜನೆಯ ಕಾಲುವೆ ಬರುವ ಮಾರ್ಗದ ಗ್ರಾಮಗಳಾದ ಹಳಿಯೂರು, ಸೊಕ್ಕೆ, ಚಾಕೋನಹಳ್ಳಿ, ಇಂದಾವರ, ಅಟತ್ತಿಗನಾಳು, ಬೀರಾಪುರ, ಚನ್ನಾಪುರ, ದ್ಯಾಮಾಪುರ, ಕಲ್ಲುಶೆಟ್ಟಿಹಳ್ಳಿ, ಜೋಡಿ ಗೋವಿಂದಪುರ, ಸಮತಳ ಗ್ರಾಮ ಸೇರಿದಂತೆ ನೂರಾರು ರೈತರು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>