<p>ತರೀಕೆರೆ: ಮಹಿಳೆಯರು ಸಮಾಜದಲ್ಲಿನ ಎಲ್ಲಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಮಹಿಳಾ ಸಮುದಾಯದ ಅಭಿವೃದ್ಧಿಗೆ ಸರ್ಕಾರಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಪೂರಕವಾಗಿ ನಡೆದುಕೊಳ್ಳುತ್ತಿವೆ ಎಂದು ಸಿಎಂಎಸ್ಎಸ್ಎಸ್ ಅಧ್ಯಕ್ಷೆ ಡಯಾನ ಹೇಳಿದರು. ತಾಲ್ಲೂಕಿನ ಸಂತವೇರಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸ್ವಸಹಾಯ ಸಂಘಗಳು ಮತ್ತು ಸ್ತ್ರೀಶಕ್ತಿ ಸಂಘಗಳು ಕೇವಲ ಹಣ ಉಳಿತಾಯ ಮಾಡುವ ಸಲುವಾಗಿ ಮಾತ್ರ ಇರದೆ ಏನನ್ನಾದರು ಸಾಧನೆ ಮಾಡುವುದಕ್ಕಾಗಿ ಹಣವನ್ನು ಬಳಸಿಕೊಳ್ಳುವಂತೆ ಮಹಿಳೆಯರಿಗೆ ಕರೆ ನೀಡಿದರು. <br /> <br /> ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ದೇವರಾಜ್ ಮಾತನಾಡಿ ಇತ್ತೀಚೆಗೆ ಮಹಿಳೆಯರು ಸಕ್ರೀಯರಾಗಿ ಸಮಾಜದಲ್ಲಿ ಮುಂದುವರೆಯುತ್ತಿರುವುದು ಸ್ವಾಗತಾರ್ಹವಾಗಿದ್ದು, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಪ್ರಬಲರಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.<br /> <br /> ಚರ್ಚ್ ಬಿಶಪ್ ಕಾರ್ಡೊಜಾ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೀರಭದ್ರಪ್ಪ, ಮಹಿಳಾ ಸಂಘಟನೆಯ ರೋಸಿ, ವಿಮಲ, ಅಪ್ಪು, ಪಾಯಸ್ ಮತ್ತು ಮಂಜುಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತರೀಕೆರೆ: ಮಹಿಳೆಯರು ಸಮಾಜದಲ್ಲಿನ ಎಲ್ಲಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಮಹಿಳಾ ಸಮುದಾಯದ ಅಭಿವೃದ್ಧಿಗೆ ಸರ್ಕಾರಗಳು ಮತ್ತು ಸರ್ಕಾರೇತರ ಸಂಸ್ಥೆಗಳು ಪೂರಕವಾಗಿ ನಡೆದುಕೊಳ್ಳುತ್ತಿವೆ ಎಂದು ಸಿಎಂಎಸ್ಎಸ್ಎಸ್ ಅಧ್ಯಕ್ಷೆ ಡಯಾನ ಹೇಳಿದರು. ತಾಲ್ಲೂಕಿನ ಸಂತವೇರಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಸ್ವಸಹಾಯ ಸಂಘಗಳು ಮತ್ತು ಸ್ತ್ರೀಶಕ್ತಿ ಸಂಘಗಳು ಕೇವಲ ಹಣ ಉಳಿತಾಯ ಮಾಡುವ ಸಲುವಾಗಿ ಮಾತ್ರ ಇರದೆ ಏನನ್ನಾದರು ಸಾಧನೆ ಮಾಡುವುದಕ್ಕಾಗಿ ಹಣವನ್ನು ಬಳಸಿಕೊಳ್ಳುವಂತೆ ಮಹಿಳೆಯರಿಗೆ ಕರೆ ನೀಡಿದರು. <br /> <br /> ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ದೇವರಾಜ್ ಮಾತನಾಡಿ ಇತ್ತೀಚೆಗೆ ಮಹಿಳೆಯರು ಸಕ್ರೀಯರಾಗಿ ಸಮಾಜದಲ್ಲಿ ಮುಂದುವರೆಯುತ್ತಿರುವುದು ಸ್ವಾಗತಾರ್ಹವಾಗಿದ್ದು, ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಪ್ರಬಲರಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.<br /> <br /> ಚರ್ಚ್ ಬಿಶಪ್ ಕಾರ್ಡೊಜಾ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೀರಭದ್ರಪ್ಪ, ಮಹಿಳಾ ಸಂಘಟನೆಯ ರೋಸಿ, ವಿಮಲ, ಅಪ್ಪು, ಪಾಯಸ್ ಮತ್ತು ಮಂಜುಳಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>