ಸೇವಾಭಾರತಿ ಸಮಾಜ ಸೇವಾ ಸಂಘದ ಸದಸ್ಯ ರಮೇಶ್ ಮಾತನಾಡಿ, ‘ಸರ್ಕಾರಿ ಶಾಲೆಗಳ ಉಳಿವಿಗೆ ಗ್ರಾಮದ ಜನರ ಸಹಕಾರ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಶಾಲೆಯ ಅಭಿವೃದ್ಧಿಗೆ ಕೈ ಜೋಡಿಸಿದರೆ, ಮಾದರಿ ಶಾಲೆಯನ್ನು ನಿರ್ಮಿಸಬಹುದು ’ ಎಂದರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಪೂರ್ಣೇಶ್ ಮತ್ತಾವರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಧನ್ಯಕುಮಾರ್, ಸದಸ್ಯ ಚಂದ್ರು, ಮುಖ್ಯ ಶಿಕ್ಷಕ ಕೃಷ್ಣಮೂರ್ತಿ, ಶಿಕ್ಷಕರಾದ ಸವಿತಾ, ಆಶಾ ಇದ್ದರು.