<p><strong>ಮೂಡಿಗೆರೆ:</strong> ಮಹಾತ್ಮ ಗಾಂಧೀಜಿಯವರ ಮೂಲ ಕಲ್ಪನೆಗಳಲ್ಲಿ ಒಂದಾದ ಹಳ್ಳಿಗಳ ಉದ್ದಾರದ ಕನಸು ನನಸಾಗುತ್ತಿದೆ ಎಂದು ವಿಧಾನ ಪರಿಷತ್ ಸಭಾಪತಿ ಡಿಎಚ್. ಶಂಕರಮೂರ್ತಿ ಅಭಿಪ್ರಾಯ ಪಟ್ಟರು.<br /> <br /> ಪಟ್ಟಣದ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಗುರುವಾರ ನಡೆದ, ಮಾಹಿತಿ ಕೇಂದ್ರ, ಮತ್ತು ಎಸ್ಜಿಎಸ್ವೈ ಅಂಗಡಿ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಗಳಲ್ಲಿ ಮೂಲ ಸೌಕರ್ಯಗಳ ಸಮಸ್ಯೆ ನಿವಾರಣೆಯಾಗುತ್ತಿದ್ದು, ನಗರ ಜೀವನ ಜಂಜಾಟದಿಂದ ಜನತೆ ಹಳ್ಳಿ ಜೀವನದೆಡೆಗೆ ಒಲವು ತೋರುತ್ತಿದ್ದಾರೆ ಎಂದರು.<br /> <br /> ಸಾಮರ್ಥ್ಯಸೌಧವನ್ನು ಉದ್ಘಾಟಿಸಿ ಶಾಸಕ ಎಂಪಿ. ಕುಮಾರಸ್ವಾಮಿ ಮಾತನಾಡಿ, ಪರಿಶಿಷ್ಟಜಾತಿ ಮತ್ತು ಪಂಗಡಗಳ ಕಾರ್ಪೊರೇಶನ್ ಸಾಲವನ್ನು ಮನ್ನಾ ಮಾಡಲಾಗಿದೆ. ತಾಲ್ಲೂಕಿನಲ್ಲಿ ಫಾರಂ 53 ನ್ನು ಸಮರ್ಪಕವಾಗಿ ವಿತರಣೆ ಮಾಡಲಾಗಿದೆ. ಇದೆಲ್ಲದರ ಪ್ರಯೋಜನ ಫಲಾನುಭವಿಗಳಿಗೆ ತಲುಪಬೇಕು ಎಂದರು.<br /> <br /> ತಾಲ್ಲೂಕು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಪ್ರಸ್ತಾಪಿಸಿದ ಶಾಸಕರು ನಮ್ಮ ವೇಗಕ್ಕೆ ತಕ್ಕಂತೆ ಕೆಲಸ ಮಾಡುವಂತಿದ್ದರೆ ಮಾತ್ರ ಕೆಲಸ ಮಾಡಿ ಇಲ್ಲದಿದ್ದರೆ ಜಾಗ ಖಾಲಿ ಮಾಡಿ ಎಂದರು.<br /> <br /> ತಾಲ್ಲೂಕು ಪಂಚಾಯತಿ ಅಧ್ಯಕ್ಷ ರಂಜನ್ ಅಜಿತ್ ಕುಮಾರ್ ಮಾತನಾಡಿ, ಈಗ ನಿರ್ಮಾಣವಾಗಿರುವ ಅಂಗಡಿ ಮಳಿಗೆಗಳಲ್ಲಿ ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದು, 12 ಕುಟುಂಬಗಳು ಈ ಅಂಗಡಿ ಮಳಿಗೆಗಳ ಮೂಲಕ ಜೀವನ ಸಾಗಿಸಬಹುದಾಗಿದೆ. ತಾಲ್ಲೂಕಿನಾದ್ಯಂತ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗುತ್ತಿದೆ ಎಂದರು.<br /> <br /> ಕಾರ್ಯಕ್ರಮದಲ್ಲಿ ತಾಪಂ ಉಪಾಧ್ಯಕ್ಷೆ ಸುಮತಿ ಸುರೇಶ್ ಜಿಪಂ ಸದಸ್ಯರಾದ ವಿಕೆ. ಶಿವೇಗೌಡ, ಅರೇಕುಡಿಗೆ ಶಿವಣ್ಣ, ಟಿಎಪಿಸಿಎಂಎಸ್ ಅಧ್ಯಕ್ಷ ಬಿಎನ್ ಜಯಂತ್, ಪಿಸಿಎಆರ್ಡಿ ಬ್ಯಾಂಕ್ ಅಧ್ಯಕ್ಷ ಹಳಸೆಶಿವಣ್ಣ, ಹಳೇಮೂಡಿಗೆರೆ ಸಹಕಾರ ಸಂಘದ ಅಧ್ಯಕ್ಷ ದುಂಡುಗ ಪ್ರಮೋದ್ ಮಾತನಾಡಿದರು. <br /> <br /> ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಿ ಲಕ್ಷ್ಮಿಕಾಂತ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ. ಮಂಜುನಾಥ್, ಸ್ಥಾಯಿಸಮಿತಿ ಅಧ್ಯಕ್ಷ ಶೇಷಗಿರಿ, ಜಿಪಂ ಸದಸ್ಯೆ ಕವಿತಾಚಂದ್ರು, ತಾಪಂ ಸದಸ್ಯರಾದ ಸಬ್ಲಿದೇವರಾಜು, ಹೂವಮ್ಮ, ನೇಪಾಆದಿತ್ಯ, ಎ.ಜೆ. ಸುಬ್ರಾಯ, ಹಿತ್ಲುಮಕ್ಕಿ ರಾಜೆಂದ್ರ, ಅನ್ನಪೂರ್ಣ, ಸುಧಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ:</strong> ಮಹಾತ್ಮ ಗಾಂಧೀಜಿಯವರ ಮೂಲ ಕಲ್ಪನೆಗಳಲ್ಲಿ ಒಂದಾದ ಹಳ್ಳಿಗಳ ಉದ್ದಾರದ ಕನಸು ನನಸಾಗುತ್ತಿದೆ ಎಂದು ವಿಧಾನ ಪರಿಷತ್ ಸಭಾಪತಿ ಡಿಎಚ್. ಶಂಕರಮೂರ್ತಿ ಅಭಿಪ್ರಾಯ ಪಟ್ಟರು.<br /> <br /> ಪಟ್ಟಣದ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಗುರುವಾರ ನಡೆದ, ಮಾಹಿತಿ ಕೇಂದ್ರ, ಮತ್ತು ಎಸ್ಜಿಎಸ್ವೈ ಅಂಗಡಿ ಮಳಿಗೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮಗಳಲ್ಲಿ ಮೂಲ ಸೌಕರ್ಯಗಳ ಸಮಸ್ಯೆ ನಿವಾರಣೆಯಾಗುತ್ತಿದ್ದು, ನಗರ ಜೀವನ ಜಂಜಾಟದಿಂದ ಜನತೆ ಹಳ್ಳಿ ಜೀವನದೆಡೆಗೆ ಒಲವು ತೋರುತ್ತಿದ್ದಾರೆ ಎಂದರು.<br /> <br /> ಸಾಮರ್ಥ್ಯಸೌಧವನ್ನು ಉದ್ಘಾಟಿಸಿ ಶಾಸಕ ಎಂಪಿ. ಕುಮಾರಸ್ವಾಮಿ ಮಾತನಾಡಿ, ಪರಿಶಿಷ್ಟಜಾತಿ ಮತ್ತು ಪಂಗಡಗಳ ಕಾರ್ಪೊರೇಶನ್ ಸಾಲವನ್ನು ಮನ್ನಾ ಮಾಡಲಾಗಿದೆ. ತಾಲ್ಲೂಕಿನಲ್ಲಿ ಫಾರಂ 53 ನ್ನು ಸಮರ್ಪಕವಾಗಿ ವಿತರಣೆ ಮಾಡಲಾಗಿದೆ. ಇದೆಲ್ಲದರ ಪ್ರಯೋಜನ ಫಲಾನುಭವಿಗಳಿಗೆ ತಲುಪಬೇಕು ಎಂದರು.<br /> <br /> ತಾಲ್ಲೂಕು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಪ್ರಸ್ತಾಪಿಸಿದ ಶಾಸಕರು ನಮ್ಮ ವೇಗಕ್ಕೆ ತಕ್ಕಂತೆ ಕೆಲಸ ಮಾಡುವಂತಿದ್ದರೆ ಮಾತ್ರ ಕೆಲಸ ಮಾಡಿ ಇಲ್ಲದಿದ್ದರೆ ಜಾಗ ಖಾಲಿ ಮಾಡಿ ಎಂದರು.<br /> <br /> ತಾಲ್ಲೂಕು ಪಂಚಾಯತಿ ಅಧ್ಯಕ್ಷ ರಂಜನ್ ಅಜಿತ್ ಕುಮಾರ್ ಮಾತನಾಡಿ, ಈಗ ನಿರ್ಮಾಣವಾಗಿರುವ ಅಂಗಡಿ ಮಳಿಗೆಗಳಲ್ಲಿ ಸ್ವಯಂ ಉದ್ಯೋಗಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದ್ದು, 12 ಕುಟುಂಬಗಳು ಈ ಅಂಗಡಿ ಮಳಿಗೆಗಳ ಮೂಲಕ ಜೀವನ ಸಾಗಿಸಬಹುದಾಗಿದೆ. ತಾಲ್ಲೂಕಿನಾದ್ಯಂತ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗುತ್ತಿದೆ ಎಂದರು.<br /> <br /> ಕಾರ್ಯಕ್ರಮದಲ್ಲಿ ತಾಪಂ ಉಪಾಧ್ಯಕ್ಷೆ ಸುಮತಿ ಸುರೇಶ್ ಜಿಪಂ ಸದಸ್ಯರಾದ ವಿಕೆ. ಶಿವೇಗೌಡ, ಅರೇಕುಡಿಗೆ ಶಿವಣ್ಣ, ಟಿಎಪಿಸಿಎಂಎಸ್ ಅಧ್ಯಕ್ಷ ಬಿಎನ್ ಜಯಂತ್, ಪಿಸಿಎಆರ್ಡಿ ಬ್ಯಾಂಕ್ ಅಧ್ಯಕ್ಷ ಹಳಸೆಶಿವಣ್ಣ, ಹಳೇಮೂಡಿಗೆರೆ ಸಹಕಾರ ಸಂಘದ ಅಧ್ಯಕ್ಷ ದುಂಡುಗ ಪ್ರಮೋದ್ ಮಾತನಾಡಿದರು. <br /> <br /> ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಿ ಲಕ್ಷ್ಮಿಕಾಂತ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಂ. ಮಂಜುನಾಥ್, ಸ್ಥಾಯಿಸಮಿತಿ ಅಧ್ಯಕ್ಷ ಶೇಷಗಿರಿ, ಜಿಪಂ ಸದಸ್ಯೆ ಕವಿತಾಚಂದ್ರು, ತಾಪಂ ಸದಸ್ಯರಾದ ಸಬ್ಲಿದೇವರಾಜು, ಹೂವಮ್ಮ, ನೇಪಾಆದಿತ್ಯ, ಎ.ಜೆ. ಸುಬ್ರಾಯ, ಹಿತ್ಲುಮಕ್ಕಿ ರಾಜೆಂದ್ರ, ಅನ್ನಪೂರ್ಣ, ಸುಧಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>