ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ‘ಕೋವಿಡ್ ಕಾರಣಕ್ಕೆ ಈ ಬಾರಿಯೂ ಸರಳ ಮತ್ತು ಅರ್ಥಪೂರ್ಣವಾಗಿ ಸ್ವಾತಂತ್ರ ದಿನ ಆಚರಿಸಲಾಗುತ್ತಿದೆ. ಅಮೃತ ಮಹೋತ್ಸವದೊಂದಿಗೆ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸವಿನೆನಪಾಗಿಯೂ ಆಚರಿಸಲಾಗುವುದು. ಸ್ವಾತಂತ್ರ್ಯ ಹೋರಾಟಗಾರರನ್ನು ಭೇಟಿಯಾದ ವೇಳೆ ಹೋರಾಟದ ದಿನಗಳ ತಮ್ಮ ಅನುಭವಗಳನ್ನು ಜಿಲ್ಲಾಡಳಿತದೊಂದಿಗೆ ಹಂಚಿಕೊಂಡಿದ್ದಾರೆ’ ಎಂದರು.
ಸ್ವಾತಂತ್ರ್ಯ ಹೋರಾಟಗಾರರಾದ ಚಿತ್ರದುರ್ಗ ತಾಲ್ಲೂಕಿನ ಕೂನಬೇವು ಗ್ರಾಮದ ಎ. ಭೀಮಪ್ಪ, ನರೇನಾಳ್ ಗ್ರಾಮದ ತಿಮ್ಮಾರೆಡ್ಡಿ, ಹಿರಿಯೂರು ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ಹನುಮಂತಪ್ಪ (ಮಡಿವಾಳರ), ಭೀಮಪ್ಪ, ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಕೋವೇರಹಟ್ಟಿಯ ಎ. ಗೋವಿಂದಪ್ಪ ಅವರನ್ನು ಸನ್ಮಾನಿಸಲಾಯಿತು.