ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮನಗೊಳಿ ಪ್ರೇಮಾವತಿ ಅವರ ನೇತೃತ್ವದಲ್ಲಿ ಅದಾಲತ್ ನಡೆಯಿತು. ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ 31,564 ಪ್ರಕರಣಗಳ ಪೈಕಿ 6,173 ಪ್ರಕರಣ ಕೈಗೆತ್ತಿಕೊಳ್ಳಲಾಗಿತ್ತು. ಅದರಲ್ಲಿ 3,671 ಪ್ರಕರಣ ರಾಜಿ ಮೂಲಕ ಇತ್ಯರ್ಥಗೊಳಿಸಿ, ₹ 5.79 ಕೋಟಿ ಹಣವನ್ನು ಸಂಬಂಧಿಸಿದವರಿಗೆ ಕೊಡಿಸಲಾಯಿತು.