ತಕ್ಷಣವೇ ಇಆರ್ಎಸ್ಎಸ್ ಕೇಂದ್ರದ ಸಿಬ್ಬಂದಿ ರಮಾಕಾಂತ್ ಅವರು ಹೊಯ್ಸಳ–7 ವಾಹನಕ್ಕೆ ವಿಷಯ ಮುಟ್ಟಿಸಿದರು. ವಾಹನದ ಅಧಿಕಾರಿ ಗಂಗಾಧರ್ ಮತ್ತು ಚಾಲಕ ರವಿ ತಕ್ಷಣ ಕಾರ್ಯಪ್ರವೃತ್ತರಾಗಿ, ಘಟನಾ ಸ್ಥಳಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳಲು ಹೋದವರ ಮನ ಒಲಿಸಿ, ಹಿರಿಯೂರಿನ ಗ್ರಾಮಾಂತರ ಠಾಣೆಗೆ ಕರೆ ತಂದಿದ್ದಾರೆ. ಠಾಣೆಯಲ್ಲಿ ಪತಿ–ಪತ್ನಿಗೆ ಬುದ್ದಿವಾದ ಹೇಳಿ ಮನೆಗೆ ಕಳುಹಿಸಿದ್ದಾರೆ. ಸಕ್ರಪ್ಪ ತನ್ನ ಅಕ್ಕನ ಮಗಳು ರತ್ನಮ್ಮಳನ್ನು ಮದುವೆಯಾಗಿದ್ದು, ಒಬ್ಬ ಮಗ, ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಇಆರ್ಎಸ್ಎಸ್ ಕೇಂದ್ರದ ಸಿಬ್ಬಂದಿ, ಹೊಯ್ಸಳ–7 ವಾಹನದ ಅಧಿಕಾರಿ ಮತ್ತು ಚಾಲಕರಿಗೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ. ರಾಧಿಕಾ ಅಭಿನಂದನೆ ಸಲ್ಲಿಸಿದ್ದಾರೆ.