‘ಯುವರೈತರು ಸ್ವ–ಉದ್ಯೋಗ ಕೈಗೊಳ್ಳಲು ಮೀನು ಕೃಷಿ ಅತ್ಯಂತ ಸೂಕ್ತ. ಜಾಗತಿಕ ಆಹಾರ ಭದ್ರತೆಯಲ್ಲಿ ಮೀನುಗಾರಿಕೆ ಅತೀ ಮುಖ್ಯ ಪಾತ್ರ ವಹಿಸಿದೆ. ರಾಜ್ಯದಲ್ಲಿ ಮೀನು ಕೃಷಿಗೆ ಅಗತ್ಯ ಇರುವಷ್ಟು ಜಲಸಂಪನ್ಮೂಲವಿದೆ. ಜಲಾಶಯಗಳು, ಕೆರೆಕಟ್ಟೆಗಳು, ನದಿಗಳು ಒಳಗೊಂಡಂತೆ ಜಲಸಂಪನ್ಮೂಲಗಳನ್ನು ಬಳಸಿಕೊಂಡು ನಡೆಸುತ್ತಿರುವ ಮೀನು ಕೃಷಿಯಲ್ಲಿ ನಮ್ಮ ದೇಶ ಜಾಗತಿಕ ಮಟ್ಟದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕವು ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಮೀನು ಕೃಷಿಗೆ ಹೆಚ್ಚಿನ ಉತ್ತೇಜನ ನೀಡಲು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ₹20,000 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಯುವಕರು ಇದರ ಪ್ರಯೋಜನ ಪಡೆಯಬೇಕು’ ಎಂದು ಅವರು ಸೂಚಿಸಿದರು.