‘ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಎಟಿಎಂಗಳಿಗೆ ಹಣ ತುಂಬುವವರು ಜಿಲ್ಲಾಧಿಕಾರಿಯ ಅನುಮತಿ ಪಡೆಯುವುದು ಕಡ್ಡಾಯ. ನಾವು ತಪಾಸಣೆ ನಡೆಸಿದಾಗ ವಾಹನದಲ್ಲಿದ್ದವರು ಸೂಕ್ತ ದಾಖಲೆ ಹಾಜರುಪಡಿಸಿಲ್ಲ. ಆದ್ದರಿಂದ ಹಣ ಹಾಗೂ ವಾಹನ ಜಪ್ತಿ ಮಾಡಿದ್ದೇವೆ’ ಎಂದು ತಹಶೀಲ್ದಾರ್ ರಾಜೇಶ್ ಕುಮಾರ್ ತಿಳಿಸಿದ್ದಾರೆ.