ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಫೆ.8ರಿಂದ 16ರವರೆಗೆ ನಡೆಯಬೇಕಿದ್ದ ‘ತರಳಬಾಳು ಹುಣ್ಣಿಮೆ’ ಮಹೋತ್ಸವವನ್ನು ಮುಂದೂಡಲಾಗಿತ್ತು. ಮೂರು ದಿವಸಗಳ ಕಾಲ ಮಠದ ಸಂಪ್ರದಾಯದಂತೆ ಕೋವಿಡ್ ಮಾರ್ಗಸೂಚಿಗೆ ಅನುಗುಣವಾಗಿ ಕಾರ್ಯಕ್ರಮಗಳು ನಡೆಯಲಿವೆ. ಫೆ.16ರಂದು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಮಠದ ಪರಂಪರೆಯಲ್ಲಿ ನಡೆಸಿಕೊಂಡು ಬಂದಿರುವ ಸದ್ಧರ್ಮ ಸಿಂಹಾಸನಾರೋಹಣವನ್ನು ನೆರವೇರಿಸಲಿದ್ದಾರೆ.