ಉದ್ಯಮಿ ಬಸವಕಿರಣ್ ಅವರು 50 ಕೆ.ಜಿ. ತೂಕದ 1,100 ಚೀಲ ಬೆಳ್ಳುಳ್ಳಿಯನ್ನು ಮಧ್ಯಪ್ರದೇಶದಲ್ಲಿ ಖರೀದಿಸಿ ಚಿತ್ರದುರ್ಗಕ್ಕೆ ತಂದಿದ್ದರು. ದಂಡಿನಕುರುಬರಹಟ್ಟಿಯ ಜಯಶೀಲರೆಡ್ಡಿ ಎಂಬುವರ ಗೋದಾಮಿನಲ್ಲಿ ಐದು ತಿಂಗಳಿಂದ ಸಂಗ್ರಹಿಸಿಟ್ಟಿದ್ದರು. ಗೋದಾಮಿಗೆ ಭೇಟಿ ನೀಡಿದಾಗ ಷಟರ್ ಮುರಿದಿದ್ದು ಗೊತ್ತಾಗಿದೆ. ಚೀಲಗಳನ್ನು ಪರಿಶೀಲಿಸಿ ದೂರು ನೀಡಿದ್ದಾರೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.