ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಜಮೀನಿನಲ್ಲಿ ಸಿಕ್ಕಿತು ₹ 16 ಲಕ್ಷ!

Last Updated 8 ಅಕ್ಟೋಬರ್ 2020, 18:46 IST
ಅಕ್ಷರ ಗಾತ್ರ

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನ ಬುಕ್ಲೊರಹಳ್ಳಿಯ ಜಮೀನೊಂದರಲ್ಲಿ ಗುರುವಾರ ₹16.8 ಲಕ್ಷ ಪತ್ತೆಯಾಗಿದೆ. ಕಳವು ಮಾಡಿದ ಹಣವನ್ನು ಜಾಲಿಗಿಡದ ಪೊದೆಯಲ್ಲಿ ಬಿಸಾಡಿ ಹೋಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ದೊಡ್ಡ ಸೂರಮ್ಮ ಎಂಬುವರ ಜಮೀನಿನಲ್ಲಿ ₹50, ₹100 ಹಾಗೂ ₹2 ಸಾವಿರ ಮುಖಬೆಲೆಯ ಕಂತೆ ಕಂತೆ ಹಣ ಸಿಕ್ಕಿದೆ. ಈ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೀದರ್- ಶ್ರೀರಂಗಪಟ್ಟಣ ಹೆದ್ದಾರಿ ವಿಸ್ತರಣೆಯ ಕಾಮಗಾರಿ ಕೈಗೆತ್ತಿಕೊಂಡಿರುವ ದಿಲೀಪ್ ಬಿಲ್ಡ್‌ಕಾನ್‌ ಕಂಪನಿಯ ಕಚೇರಿ ಅನತಿ ದೂರದಲ್ಲಿದೆ. ಅ.3ರಂದು ಇದೇ ಕಚೇರಿಯಲ್ಲಿ ₹ 36 ಲಕ್ಷ ಹಣ ಕಳವಾಗಿತ್ತು. ಬ್ಯಾಂಕ್‌ನಿಂದ ಬಿಡಿಸಿಕೊಂಡು ತಂದಿದ್ದ ಹಣವನ್ನು ಚಾವಣಿ ಮುರಿದು ಕಳವು ಮಾಡಲಾಗಿತ್ತು. ಈ ಹಣವನ್ನು ಬಿಸಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT