<p><strong>ಹಿರಿಯೂರು</strong>: ‘ತಾಲ್ಲೂಕಿನಲ್ಲಿ ಹಿಂದಿನ ವರ್ಷ 49 ಡೆಂಗಿ ಪ್ರಕರಣಗಳು ವರದಿಯಾಗಿದ್ದವು. ಪ್ರಸಕ್ತ ವರ್ಷ ಇದುವರೆಗೆ 18 ಪ್ರಕರಣಗಳು ವರದಿಯಾಗಿವೆ. ಸೊಳ್ಳೆಗಳು ಉತ್ಪತ್ತಿ ಆಗದಂತೆ ನೋಡಿಕೊಂಡರೆ ಡೆಂಗಿಯಿಂದ ಪಾರಾಗಬಹುದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ, ನಗರಸಭೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ನಗರಸಭೆ ಸಿಬ್ಬಂದಿ, ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಡೆಂಗಿ ನಿಯಂತ್ರಣ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಸೊಳ್ಳೆಗಳ ಉತ್ಪತ್ತಿ ತಾಣದ ನಾಶ ಪಡಿಸಲು ಕ್ರಿಯಾಯೋಜನೆ ತಯಾರಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಹೈರಿಸ್ಕ್ ಪ್ರದೇಶಗಳಲ್ಲಿ ಲಾರ್ವಾ ಸಮೀಕ್ಷೆ ವೇಳೆ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>‘ಡೆಂಗಿ ಹರಡುವ ಸೊಳ್ಳೆಗಳು ಪೂರ್ವ ಮುಂಗಾರು, ಮುಂಗಾರು ಹಾಗೂ ಮುಂಗಾರಿನ ನಂತರದ ದಿನಗಳಲ್ಲಿ ಹೆಚ್ಚಾಗಿ ಉತ್ಪತ್ತಿಯಾಗುತ್ತವೆ. ಇದರಿಂದ ಡೆಂಗಿ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಈ ಬಗ್ಗೆ ಎಚ್ಚರ ಅಗತ್ಯ’ ಎಂದು ನಗರಸಭೆ ಪೌರಾಯುಕ್ತ ಎಚ್.ಮಹಾಂತೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು</strong>: ‘ತಾಲ್ಲೂಕಿನಲ್ಲಿ ಹಿಂದಿನ ವರ್ಷ 49 ಡೆಂಗಿ ಪ್ರಕರಣಗಳು ವರದಿಯಾಗಿದ್ದವು. ಪ್ರಸಕ್ತ ವರ್ಷ ಇದುವರೆಗೆ 18 ಪ್ರಕರಣಗಳು ವರದಿಯಾಗಿವೆ. ಸೊಳ್ಳೆಗಳು ಉತ್ಪತ್ತಿ ಆಗದಂತೆ ನೋಡಿಕೊಂಡರೆ ಡೆಂಗಿಯಿಂದ ಪಾರಾಗಬಹುದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ, ನಗರಸಭೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ನಗರಸಭೆ ಸಿಬ್ಬಂದಿ, ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಡೆಂಗಿ ನಿಯಂತ್ರಣ ಕುರಿತು ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಸೊಳ್ಳೆಗಳ ಉತ್ಪತ್ತಿ ತಾಣದ ನಾಶ ಪಡಿಸಲು ಕ್ರಿಯಾಯೋಜನೆ ತಯಾರಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಹೈರಿಸ್ಕ್ ಪ್ರದೇಶಗಳಲ್ಲಿ ಲಾರ್ವಾ ಸಮೀಕ್ಷೆ ವೇಳೆ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>‘ಡೆಂಗಿ ಹರಡುವ ಸೊಳ್ಳೆಗಳು ಪೂರ್ವ ಮುಂಗಾರು, ಮುಂಗಾರು ಹಾಗೂ ಮುಂಗಾರಿನ ನಂತರದ ದಿನಗಳಲ್ಲಿ ಹೆಚ್ಚಾಗಿ ಉತ್ಪತ್ತಿಯಾಗುತ್ತವೆ. ಇದರಿಂದ ಡೆಂಗಿ ಸಾರ್ವಜನಿಕ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಈ ಬಗ್ಗೆ ಎಚ್ಚರ ಅಗತ್ಯ’ ಎಂದು ನಗರಸಭೆ ಪೌರಾಯುಕ್ತ ಎಚ್.ಮಹಾಂತೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>