ಸಾರ್ವಜನಿಕರ ದೂರಿನ ಮೇರೆಗೆ ಅಬಕಾರಿ ಜಂಟಿ ಆಯುಕ್ತ ಮೋಹನ್ ಕುಮಾರ್, ಉಪ ಆಯುಕ್ತ ಆರ್.ನಾಗಶಯನ ಅವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಅಧೀಕ್ಷಕ ಶಿವಹರಳಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಅಬಕಾರಿ ಉಪ ನಿರೀಕ್ಷಕ ಡಿ.ಬಿ.ಅವಿನಾಶ್, ಅಬಕಾರಿ ರಕ್ಷಕರಾದ ದಾದಾಪೀರ್, ಬಸವರಾಜ್, ಮಧುರಾಯ, ಪ್ರವೀಣ್ ಕುಮಾರ್, ಬಸವರಾಜ್ ದಾಳಿಯಲ್ಲಿ ಭಾಗವಹಿಸಿದ್ದರು.