ರೈತ ಮುತ್ತಯ್ಯ 150ಕ್ಕೂ ಹೆಚ್ಚು ಕುರಿಗಳನ್ನು ಸಾಕಿದ್ದು, ಗ್ರಾಮದ ಹೊರವಲಯದಲ್ಲಿ ಕುರಿಗಳನ್ನು ಮೇಯಿಸಿಕೊಂಡು ಸಂಜೆ ಮನೆ ಬಳಿಯಿದ್ದ ಕುರಿರೊಪ್ಪದಲ್ಲಿ ಕೂಡಿದ್ದಾರೆ. ಆದರೆ ಸಂಜೆಯ ವೇಳೆ
ಆರಂಭವಾದ ಮಳೆ ರಾತ್ರಿಯಿಡೀ ಧಾರಾಕಾರವಾಗಿ ಸುರಿದಿದ್ದರಿಂದ ಕುರಿಗಳು ಮಳೆಯಲ್ಲಿ ತೊಯ್ದಿವೆ. ಬೆಳಿಗ್ಗೆ ರೊಪ್ಪದ ಬಳಿ ನೋಡಿದಾಗ ಮುವತ್ತಕ್ಕೂ ಹೆಚ್ಚು ಕುರಿಗಳು ಸತ್ತಿವೆ. ತಕ್ಷಣ ಪಶುವೈದ್ಯರನ್ನು ಸಂಪರ್ಕಿಸಲಾಯಿತು.