<p><strong>ನಾಯಕನಹಟ್ಟಿ: </strong>ಧಾರಾಕಾರವಾಗಿ ಸುರಿದ ಅಕಾಲಿಕ ಮಳೆಗೆ ಹೋಬಳಿಯ ನೇರಲಗುಂಟೆ ಸಮೀಪದ ಬತ್ತಯ್ಯನಹಟ್ಟಿ ಗ್ರಾಮದಲ್ಲಿ 30ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ.</p>.<p>ರೈತ ಮುತ್ತಯ್ಯ 150ಕ್ಕೂ ಹೆಚ್ಚು ಕುರಿಗಳನ್ನು ಸಾಕಿದ್ದು, ಗ್ರಾಮದ ಹೊರವಲಯದಲ್ಲಿ ಕುರಿಗಳನ್ನು ಮೇಯಿಸಿಕೊಂಡು ಸಂಜೆ ಮನೆ ಬಳಿಯಿದ್ದ ಕುರಿರೊಪ್ಪದಲ್ಲಿ ಕೂಡಿದ್ದಾರೆ. ಆದರೆ ಸಂಜೆಯ ವೇಳೆ<br />ಆರಂಭವಾದ ಮಳೆ ರಾತ್ರಿಯಿಡೀ ಧಾರಾಕಾರವಾಗಿ ಸುರಿದಿದ್ದರಿಂದ ಕುರಿಗಳು ಮಳೆಯಲ್ಲಿ ತೊಯ್ದಿವೆ. ಬೆಳಿಗ್ಗೆ ರೊಪ್ಪದ ಬಳಿ ನೋಡಿದಾಗ ಮುವತ್ತಕ್ಕೂ ಹೆಚ್ಚು ಕುರಿಗಳು ಸತ್ತಿವೆ. ತಕ್ಷಣ ಪಶುವೈದ್ಯರನ್ನು ಸಂಪರ್ಕಿಸಲಾಯಿತು.</p>.<p>‘ರಾತ್ರಿ ಸುರಿದ ಮಳೆಗೆ ಕುರಿಗಳಿಗೆ ಶೀತವಾಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟಿವೆ’ ಎಂದು ಆಸ್ಪತ್ರೆಯ ಸಿಬ್ಬಂದಿ ತಿಪ್ಪೇಸ್ವಾಮಿ ತಿಳಿಸಿದ್ದಾರೆ.</p>.<p>ಇನ್ನೂ ಹಲವು ಕುರಿಗಳಿಗೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮೃತಪಟ್ಟ ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.</p>.<p>‘ಮಳೆಯಿಂದ ನಮ್ಮ ಕುರಿಗಳ ಜೀವ ಹೋಗಿದೆ. ಇವುಗಳಿಂದಲೇ ನಮ್ಮ ಜೀವನ ನಡೆಯುತ್ತಿತ್ತು. ಆದರೆ ಇದ್ದಕ್ಕಿದ್ದ ಹಾಗೇ ಹಲವು ಕುರಿಗಳು ಮೃತಪಟ್ಟಿದ್ದು, ಘಟನೆಯಿಂದ ಮನಸ್ಸಿಗೆ ನೋವುಂಟಾಗಿದೆ’ ಎಂದು ಅಳಲು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ: </strong>ಧಾರಾಕಾರವಾಗಿ ಸುರಿದ ಅಕಾಲಿಕ ಮಳೆಗೆ ಹೋಬಳಿಯ ನೇರಲಗುಂಟೆ ಸಮೀಪದ ಬತ್ತಯ್ಯನಹಟ್ಟಿ ಗ್ರಾಮದಲ್ಲಿ 30ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ.</p>.<p>ರೈತ ಮುತ್ತಯ್ಯ 150ಕ್ಕೂ ಹೆಚ್ಚು ಕುರಿಗಳನ್ನು ಸಾಕಿದ್ದು, ಗ್ರಾಮದ ಹೊರವಲಯದಲ್ಲಿ ಕುರಿಗಳನ್ನು ಮೇಯಿಸಿಕೊಂಡು ಸಂಜೆ ಮನೆ ಬಳಿಯಿದ್ದ ಕುರಿರೊಪ್ಪದಲ್ಲಿ ಕೂಡಿದ್ದಾರೆ. ಆದರೆ ಸಂಜೆಯ ವೇಳೆ<br />ಆರಂಭವಾದ ಮಳೆ ರಾತ್ರಿಯಿಡೀ ಧಾರಾಕಾರವಾಗಿ ಸುರಿದಿದ್ದರಿಂದ ಕುರಿಗಳು ಮಳೆಯಲ್ಲಿ ತೊಯ್ದಿವೆ. ಬೆಳಿಗ್ಗೆ ರೊಪ್ಪದ ಬಳಿ ನೋಡಿದಾಗ ಮುವತ್ತಕ್ಕೂ ಹೆಚ್ಚು ಕುರಿಗಳು ಸತ್ತಿವೆ. ತಕ್ಷಣ ಪಶುವೈದ್ಯರನ್ನು ಸಂಪರ್ಕಿಸಲಾಯಿತು.</p>.<p>‘ರಾತ್ರಿ ಸುರಿದ ಮಳೆಗೆ ಕುರಿಗಳಿಗೆ ಶೀತವಾಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟಿವೆ’ ಎಂದು ಆಸ್ಪತ್ರೆಯ ಸಿಬ್ಬಂದಿ ತಿಪ್ಪೇಸ್ವಾಮಿ ತಿಳಿಸಿದ್ದಾರೆ.</p>.<p>ಇನ್ನೂ ಹಲವು ಕುರಿಗಳಿಗೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮೃತಪಟ್ಟ ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.</p>.<p>‘ಮಳೆಯಿಂದ ನಮ್ಮ ಕುರಿಗಳ ಜೀವ ಹೋಗಿದೆ. ಇವುಗಳಿಂದಲೇ ನಮ್ಮ ಜೀವನ ನಡೆಯುತ್ತಿತ್ತು. ಆದರೆ ಇದ್ದಕ್ಕಿದ್ದ ಹಾಗೇ ಹಲವು ಕುರಿಗಳು ಮೃತಪಟ್ಟಿದ್ದು, ಘಟನೆಯಿಂದ ಮನಸ್ಸಿಗೆ ನೋವುಂಟಾಗಿದೆ’ ಎಂದು ಅಳಲು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>