<p><strong>ಚಿತ್ರದುರ್ಗ:</strong> ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತರಾದ ಕಟ್ಟಡ ಕಾರ್ಮಿಕರಿಗೆ ಸ್ವಂತ ಮನೆ ನಿರ್ಮಿಸಿಕೊಳ್ಳಲು ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ₹ 5ಲಕ್ಷ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಹಳೆ ಮಾಧ್ಯಮಿಕ ಶಾಲಾ ಆವರಣದ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಾರ್ಮಿಕ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಂಘದ ರಾಜ್ಯ ಘಟಕದ ಅಧ್ಯಕ್ಷ ಎನ್. ರಮೇಶ್ ಮಾತನಾಡಿ, ‘ರಾಜ್ಯದಲ್ಲಿನ ಕಾರ್ಮಿಕರ ಕಲ್ಯಾಣಕ್ಕೆ ಸರ್ಕಾರ ಶ್ರಮಿಸುತ್ತಿದೆ ಎಂಬುದಾಗಿ ಮುಖ್ಯಮಂತ್ರಿ, ಸಚಿವರು ಹೇಳುತ್ತಿದ್ದಾರೆ. ಯಾರ ಕಲ್ಯಾಣ ಮಾಡಿದ್ದಾರೆ ಎಂಬುದನ್ನು ತೋರಿಸಲಿ’ ಎಂದು ಸವಾಲು ಹಾಕಿದರು.</p>.<p>‘ರಾಜ್ಯದಲ್ಲಿ ಸೆಸ್ ಬಾಕಿ ಉಳಿಸಿಕೊಂಡಿರುವ ಸೋಲಾರ್ ಕಂಪನಿಗಳು, ಖಾಸಗಿ ದೂರವಾಣಿ ಸಂಸ್ಥೆಗಳು, ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳ ಸೆಸ್ ಹಣ ವಸೂಲಿ ಮಾಡುವ ಮೂಲಕ ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಮುಂದಾಗಬೇಕು’ ಎಂದು ಒತ್ತಾಯಿಸಿದರು.</p>.<p>ಪ್ರಧಾನ ಕಾರ್ಯದರ್ಶಿ ವೈ. ಕುಮಾರ್, ‘ನೋಂದಾಯಿತ ಕಟ್ಟಡ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಸಹಾಯಧನವಾಗಿ ₹ 10ಲಕ್ಷ ನೀಡಬೇಕು. ಸಹಜ ಸಾವಿಗೆ ₹ 5 ಲಕ್ಷ ಪರಿಹಾರ ವಿತರಿಸಬೇಕು’ ಎಂದು ಆಗ್ರಹಿಸಿದರು.</p>.<p>‘ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಆದೇಶ ಮುಂದುವರೆಸಬೇಕು. ವೇತನ ದ್ವಿಗುಣಗೊಳಿಸಲು ಮುಂದಾಗಬೇಕು. 60 ವರ್ಷ ತುಂಬಿದ ಕಟ್ಟಡ ಕಾರ್ಮಿಕರಿಗೆ ವೈದ್ಯಕೀಯ ಸಹಾಯಧನ ಮೃತರಾಗುವವರೆಗೂ ಮುಂದುವರೆಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರನ್ನು ಬೇರ್ಪಡಿಸಬೇಕು. ಪ್ರಧಾನಮಂತ್ರಿ ಮನ್ಧನ್ ಪಿಂಚಣಿ ಯೋಜನೆಯ ವಂತಿಕೆಯನ್ನು ಮಂಡಳಿಯಲ್ಲಿ ಇರುವ ಹಣದಿಂದಲೇ ಭರಿಸಬೇಕು. ಜತೆಗೆ ಪಿಂಚಣಿ ನೀಡುವಂತೆ ಆದೇಶಿಸಬೇಕು. ರಾಜ್ಯದಾದ್ಯಂತ ತಲೆದೋರಿರುವ ಸರ್ವರ್ ಸಮಸ್ಯೆ ಕೂಡಲೇ ಬಗೆಹರಿಸಬೇಕು’ ಎಂದು ಸರ್ಕಾರಕ್ಕೆ ಕೋರಿದರು.</p>.<p>ಇದೇ ಸಂದರ್ಭದಲ್ಲಿ ನಮ್ಮ ಎಲ್ಲ ನ್ಯಾಯಯುತ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದರು.</p>.<p>ರಾಜ್ಯ ಘಟಕದ ಉಪಾಧ್ಯಕ್ಷ ಕೆ. ಗೌಸ್ಪೀರ್, ಖಜಾಂಚಿ ಡಿ. ಈಶ್ವರಪ್ಪ, ಮುಖಂಡರಾದ ಜೆ. ಮಂಜುನಾಥ್, ಇಮಾಮ್ ಮೊಹಿಮುದ್ದೀನ್, ವೈ. ಬಸವರಾಜ್, ಮುಜೀಬುಲ್ಲಾ, ಮಹಂತೇಶ್, ರಾಜಣ್ಣ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತರಾದ ಕಟ್ಟಡ ಕಾರ್ಮಿಕರಿಗೆ ಸ್ವಂತ ಮನೆ ನಿರ್ಮಿಸಿಕೊಳ್ಳಲು ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ₹ 5ಲಕ್ಷ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಹಳೆ ಮಾಧ್ಯಮಿಕ ಶಾಲಾ ಆವರಣದ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಾರ್ಮಿಕ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಂಘದ ರಾಜ್ಯ ಘಟಕದ ಅಧ್ಯಕ್ಷ ಎನ್. ರಮೇಶ್ ಮಾತನಾಡಿ, ‘ರಾಜ್ಯದಲ್ಲಿನ ಕಾರ್ಮಿಕರ ಕಲ್ಯಾಣಕ್ಕೆ ಸರ್ಕಾರ ಶ್ರಮಿಸುತ್ತಿದೆ ಎಂಬುದಾಗಿ ಮುಖ್ಯಮಂತ್ರಿ, ಸಚಿವರು ಹೇಳುತ್ತಿದ್ದಾರೆ. ಯಾರ ಕಲ್ಯಾಣ ಮಾಡಿದ್ದಾರೆ ಎಂಬುದನ್ನು ತೋರಿಸಲಿ’ ಎಂದು ಸವಾಲು ಹಾಕಿದರು.</p>.<p>‘ರಾಜ್ಯದಲ್ಲಿ ಸೆಸ್ ಬಾಕಿ ಉಳಿಸಿಕೊಂಡಿರುವ ಸೋಲಾರ್ ಕಂಪನಿಗಳು, ಖಾಸಗಿ ದೂರವಾಣಿ ಸಂಸ್ಥೆಗಳು, ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳ ಸೆಸ್ ಹಣ ವಸೂಲಿ ಮಾಡುವ ಮೂಲಕ ಕಾರ್ಮಿಕರಿಗೆ ಸೌಲಭ್ಯ ಒದಗಿಸಲು ಮುಂದಾಗಬೇಕು’ ಎಂದು ಒತ್ತಾಯಿಸಿದರು.</p>.<p>ಪ್ರಧಾನ ಕಾರ್ಯದರ್ಶಿ ವೈ. ಕುಮಾರ್, ‘ನೋಂದಾಯಿತ ಕಟ್ಟಡ ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಸಹಾಯಧನವಾಗಿ ₹ 10ಲಕ್ಷ ನೀಡಬೇಕು. ಸಹಜ ಸಾವಿಗೆ ₹ 5 ಲಕ್ಷ ಪರಿಹಾರ ವಿತರಿಸಬೇಕು’ ಎಂದು ಆಗ್ರಹಿಸಿದರು.</p>.<p>‘ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಆದೇಶ ಮುಂದುವರೆಸಬೇಕು. ವೇತನ ದ್ವಿಗುಣಗೊಳಿಸಲು ಮುಂದಾಗಬೇಕು. 60 ವರ್ಷ ತುಂಬಿದ ಕಟ್ಟಡ ಕಾರ್ಮಿಕರಿಗೆ ವೈದ್ಯಕೀಯ ಸಹಾಯಧನ ಮೃತರಾಗುವವರೆಗೂ ಮುಂದುವರೆಸಬೇಕು’ ಎಂದು ಒತ್ತಾಯಿಸಿದರು.</p>.<p>‘ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರನ್ನು ಬೇರ್ಪಡಿಸಬೇಕು. ಪ್ರಧಾನಮಂತ್ರಿ ಮನ್ಧನ್ ಪಿಂಚಣಿ ಯೋಜನೆಯ ವಂತಿಕೆಯನ್ನು ಮಂಡಳಿಯಲ್ಲಿ ಇರುವ ಹಣದಿಂದಲೇ ಭರಿಸಬೇಕು. ಜತೆಗೆ ಪಿಂಚಣಿ ನೀಡುವಂತೆ ಆದೇಶಿಸಬೇಕು. ರಾಜ್ಯದಾದ್ಯಂತ ತಲೆದೋರಿರುವ ಸರ್ವರ್ ಸಮಸ್ಯೆ ಕೂಡಲೇ ಬಗೆಹರಿಸಬೇಕು’ ಎಂದು ಸರ್ಕಾರಕ್ಕೆ ಕೋರಿದರು.</p>.<p>ಇದೇ ಸಂದರ್ಭದಲ್ಲಿ ನಮ್ಮ ಎಲ್ಲ ನ್ಯಾಯಯುತ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದರು.</p>.<p>ರಾಜ್ಯ ಘಟಕದ ಉಪಾಧ್ಯಕ್ಷ ಕೆ. ಗೌಸ್ಪೀರ್, ಖಜಾಂಚಿ ಡಿ. ಈಶ್ವರಪ್ಪ, ಮುಖಂಡರಾದ ಜೆ. ಮಂಜುನಾಥ್, ಇಮಾಮ್ ಮೊಹಿಮುದ್ದೀನ್, ವೈ. ಬಸವರಾಜ್, ಮುಜೀಬುಲ್ಲಾ, ಮಹಂತೇಶ್, ರಾಜಣ್ಣ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>