ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಟಿಕುರ್ಕೆ ಬಳಿ ಹೆದ್ದಾರಿಯಲ್ಲಿ ಅಪಘಾತ: ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು

ಭದ್ರಾವತಿಯ ಸಂಬಂಧಿಕರ ಮನೆಯಿಂದ ಬೆಂಗಳೂರಿಗೆ ಮರಳುತ್ತಿದ್ದಾಗ ಘಟನೆ
Last Updated 1 ಮೇ 2019, 14:10 IST
ಅಕ್ಷರ ಗಾತ್ರ

ಹಿರಿಯೂರು: ಮೇಟಿಕುರ್ಕೆ ಸಮೀಪದ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ತಾಯಮ್ಮ (50), ಲತಾ (26), ವರ್ಣಿಕಾ (9), ಜಾಹ್ನವಿ (3) ಹಾಗೂ ಸುಶ್ಮಿತಾ (13) ಮೃತಪಟ್ಟವರು. ಗಾಯಗೊಂಡಿದ್ದ ಇತರ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭದ್ರಾವತಿಯ ಸಂಬಂಧಿಕರ ಮನೆಯಿಂದ ಬೆಂಗಳೂರಿಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಮೇಟಿಕುರ್ಕೆ ಸಮೀಪ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಲು ಪ್ರಯತ್ನಿಸಿದಾಗ ಇನ್ನೋವಾ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಆಗ ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಬೆಂಗಳೂರಿನಿಂದ ಚಿತ್ರದುರ್ಗದತ್ತ ಬರುತ್ತಿದ್ದ ಸರಕು ಸಾಗಣೆ ಲಾರಿಗೆ ಅಪ್ಪಳಿಸಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಕೆ.ಅರುಣ್‌ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT