ವ್ಯರ್ಥವಾಗುತ್ತಿರುವ ಕುಡಿಯುವ ನೀರು

ಮೊಳಕಾಲ್ಮುರು: ತೀವ್ರ ನೀರಿನ ಹಾಹಾಕಾರ ಎದುರಿಸುತ್ತಿರುವ ಪಟ್ಟಣದ ಜನ ನೀರಿಗಾಗಿ ಬೀದಿಗಿಳಿದು ಪ್ರತಿಭಟನೆ ಮಾಡುವುದು ಒಂದೆಡೆಯಾದರೆ, ಪಟ್ಟಣಕ್ಕೆ ಪೂರೈಕೆಯಾಗುವ ಕುಡಿಯುವ ನೀರು ಅಪಾರ ಪ್ರಮಾಣದಲ್ಲಿ ಹರಿದು ವ್ಯರ್ಥವಾಗುತ್ತಿದೆ.
ಸಮೀಪದ ಹಾನಗಲ್ ರಸ್ತೆಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಕ್ಕದ ಪರಮೇಶ್ವರಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಹಾದು ಹೋಗಿರುವ ರಂಗಯ್ಯನದುರ್ಗ ಜಲಾಶಯ ಕುಡಿಯುವ ನೀರು ಪೂರೈಕೆಯ ವಾಲ್ವ್ ಹಾಗೂ ಪೈಪ್ ಒಡೆದು ಅಪಾರ ನೀರು ಹರಿದು ವ್ಯರ್ಥವಾಗುತ್ತಿದೆ ಎಂದು ರೈತಸಂಘ ಹಾಗೂ ಹಸಿರುಸೇನೆ ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿ ಮರ್ಲಹಳ್ಳಿ ರವಿಕುಮಾರ್ ದೂರಿದ್ದಾರೆ.
ವ್ಯರ್ಥವಾಗುತ್ತಿರುವ ಬಗ್ಗೆ ಪಟ್ಟಣ ಪಂಚಾಯಿತಿಗೆ ಮಾಹಿತಿ ನೀಡಿದ್ದರೂ ಕ್ರಮ ಕೈಗೊಂಡಿಲ್ಲ. ಸಾವಿರಾರು ರೂಪಾಯಿ ಖರ್ಚು ಮಾಡಿ ಟ್ಯಾಂಕರ್ ನೀರನ್ನು ಪಟ್ಟಣ ಪಂಚಾಯಿತಿ ಪೂರೈಕೆ ಮಾಡುತ್ತಿದೆ. ಹಿರಿಯ ಅಧಿಕಾರಿಗಳು ತಕ್ಷಣವೇ ಇತ್ತ ಗಮನಹರಿಸಿ ಕ್ರಮಕ್ಕೆ ಮುಂದಾಗಬೇಕು ಎಂದು ಮನವಿ ಮಾಡಲಾಗಿದೆ. ಈ ಬಗ್ಗೆ ಸ್ಪಷ್ಟನೆ ಪಡೆಯಲು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಲಭ್ಯವಾಗಲಿಲ್ಲ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.