ಕುಡಿದ ಅಮಲಿನಲ್ಲಿ ಬಸ್ ನಿಲ್ದಾಣಕ್ಕೆ ಬಂದ ಮಂಜುನಾಥ ಮಹಿಳೆಯೊಬ್ಬರಿಗೆ ಸನ್ನೆ ಮಾಡಿ ಅನುಚಿತ ವರ್ತನೆ ತೋರಿದ್ದಾರೆ. ಇದನ್ನು ಪ್ರಶ್ನಿಸಿದ ಮಹಿಳೆ ವಿರುದ್ಧ ಗಲಾಟೆಗೆ ಇಳಿದಿದ್ದಾರೆ. ಸ್ಥಳದಲ್ಲೇ ಇದ್ದ ಸಾರಿಗೆ ಇಲಾಖೆ ಸಿಬ್ಬಂದಿ ಆರೋಪಿಯನ್ನು ಹಿಡಿದು ಥಳಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ. ಸ್ಥಳಕ್ಕೆ ಬಂದ ಕೋಟೆ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.