<p><strong>ಸಿರಿಗೆರೆ:</strong> ‘ದೇಶಕ್ಕೆ ಸ್ಥಿರ ಸರ್ಕಾರದ ಅಗತ್ಯವಿತ್ತು, ದೇಶಭಕ್ತರು ಅಧಿಕಾರ ನೀಡಿದ್ದಾರೆ. ಅಂತೆಯೇ ಚುನಾವಣೆಯ ಸಂದರ್ಭದಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸಲು ಬಿಜೆಪಿ ಬದ್ಧ’ ಎಂದು ಸಂಸದ ಎ.ನಾರಾಯಣಸ್ವಾಮಿ ತಿಳಿಸಿದರು.</p>.<p>ಶನಿವಾರ ಇಲ್ಲಿನ ಬೃಹನ್ಮಠದ ಐಕ್ಯಮಂಟಪಕ್ಕೆ ಭೇಟಿ ನೀಡಿ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದು ಮಾತನಾಡಿದರು.</p>.<p>‘ಚಿತ್ರದುರ್ಗ ಕ್ಷೇತ್ರಕ್ಕೆ ಮೊದಲು ನೀರಿನ ಸಮಸ್ಯೆ ಬಗೆಹರಿಸುವ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಕ್ಷೇತ್ರದ ಶಾಸಕರು ಹಾಗೂ ಗ್ರಾಮದ ಮುಖಂಡರಲ್ಲಿ ಚರ್ಚಿಸಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದರು.</p>.<p>ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ‘ಎಲ್ಲ ಸಮುದಾಯದವರು ಸಮಾಜಕ್ಕೆ ತಲೆಬಾಗಿ ನಡೆಯಬೇಕು. ಸಮಾಜದ ಒಳಿತಿಗಾಗಿ ನಿಮ್ಮ ಕಾರ್ಯವನ್ನು ಮುಡಿಪಾಗಿಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಶಾಸಕ ಎಂ.ಚಂದ್ರಪ್ಪ, ಡಿ.ವಿ.ಶರಣಪ್ಪ, ತಿಪ್ಪೇಸ್ವಾಮಿ, ಮಹೇಶ್ವರಪ್ಪ, ಲಿಂಗರಾಜ್, ಇಂದ್ರಪ್ಪಗೌಡ, ಕೋಗುಂಡೆ ಮಂಜಣ್ಣ, ಸಿರಿಗೆರೆ ಮೋಹನ್, ಹಳವುದರ ತಿಪ್ಪೇಸ್ವಾಮಿ, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಎಸ್.ಬಿ.ರಂಗನಾಥ್ ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ:</strong> ‘ದೇಶಕ್ಕೆ ಸ್ಥಿರ ಸರ್ಕಾರದ ಅಗತ್ಯವಿತ್ತು, ದೇಶಭಕ್ತರು ಅಧಿಕಾರ ನೀಡಿದ್ದಾರೆ. ಅಂತೆಯೇ ಚುನಾವಣೆಯ ಸಂದರ್ಭದಲ್ಲಿ ನೀಡಿದ ಆಶ್ವಾಸನೆಗಳನ್ನು ಈಡೇರಿಸಲು ಬಿಜೆಪಿ ಬದ್ಧ’ ಎಂದು ಸಂಸದ ಎ.ನಾರಾಯಣಸ್ವಾಮಿ ತಿಳಿಸಿದರು.</p>.<p>ಶನಿವಾರ ಇಲ್ಲಿನ ಬೃಹನ್ಮಠದ ಐಕ್ಯಮಂಟಪಕ್ಕೆ ಭೇಟಿ ನೀಡಿ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಪುತ್ತಳಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದು ಮಾತನಾಡಿದರು.</p>.<p>‘ಚಿತ್ರದುರ್ಗ ಕ್ಷೇತ್ರಕ್ಕೆ ಮೊದಲು ನೀರಿನ ಸಮಸ್ಯೆ ಬಗೆಹರಿಸುವ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಕ್ಷೇತ್ರದ ಶಾಸಕರು ಹಾಗೂ ಗ್ರಾಮದ ಮುಖಂಡರಲ್ಲಿ ಚರ್ಚಿಸಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದರು.</p>.<p>ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ‘ಎಲ್ಲ ಸಮುದಾಯದವರು ಸಮಾಜಕ್ಕೆ ತಲೆಬಾಗಿ ನಡೆಯಬೇಕು. ಸಮಾಜದ ಒಳಿತಿಗಾಗಿ ನಿಮ್ಮ ಕಾರ್ಯವನ್ನು ಮುಡಿಪಾಗಿಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಶಾಸಕ ಎಂ.ಚಂದ್ರಪ್ಪ, ಡಿ.ವಿ.ಶರಣಪ್ಪ, ತಿಪ್ಪೇಸ್ವಾಮಿ, ಮಹೇಶ್ವರಪ್ಪ, ಲಿಂಗರಾಜ್, ಇಂದ್ರಪ್ಪಗೌಡ, ಕೋಗುಂಡೆ ಮಂಜಣ್ಣ, ಸಿರಿಗೆರೆ ಮೋಹನ್, ಹಳವುದರ ತಿಪ್ಪೇಸ್ವಾಮಿ, ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಎಸ್.ಬಿ.ರಂಗನಾಥ್ ಹಾಗೂ ಬಿಜೆಪಿ ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>