ಚಿತ್ರದುರ್ಗ:ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಶನಿವಾರ ಇಲ್ಲಿನ ವಿವಿಧೆಡೆ ಸಹಿ ಆಂದೋಲನ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಆಯೋಜಿಸಿದ್ದ ಸಹಿ ಆಂದೋಲನಕ್ಕೆಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಚಾಲನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಜಿಲ್ಲಾ ಸರ್ವೇಕ್ಷಣಾ ಘಟಕದ ಕಚೇರಿ ಆವರಣ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸೇರಿ ವಿವಿಧೆಡೆ ಸಹಿ ಆಂದೋಲನ ಮುಂದುವರೆಯಿತು.
ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರಿಂದ ಸಹಿ ಸಂಗ್ರಹಿಸುವ ಮೂಲಕ ತಂಬಾಕು ಮುಕ್ತ ಪೀಳಿಗೆಗೆ ಪ್ರತಿಜ್ಞೆ ಮತ್ತು ಬೆಂಬಲ ನೀಡುವಂತೆ ಜಾಗೃತಿ ಮೂಡಿಸಲಾಯಿತು.ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್ ಇದ್ದರು.