ಜಿಲ್ಲೆಯ ಹಲವೆಡೆ ಚಿಕಿತ್ಸೆ ಪಡೆಯುತ್ತಿ ದ್ದವರಲ್ಲಿ 45 ಜನರು ಗುಣಮುಖರಾಗಿ ಶನಿವಾರ ಬಿಡುಗಡೆಯಾಗಿದ್ದಾರೆ. ಸೋಂಕಿತರ ಪೈಕಿ ಈವರೆಗೆ 12,179 ಜನರು ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಸದ್ಯ 458 ಸಕ್ರಿಯ ಪ್ರಕರಣಗಳಿವೆ. ಇನ್ನೂ 432 ಜನರ ವರದಿ ಬರುವುದು ಬಾಕಿ ಇದೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಂದು ಲಕ್ಷ ಜನರನ್ನು ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರೆಂದು ಗುರುತಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.