ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ್ ಚಿತ್ರದುರ್ಗದ ಕಂದಾಯ ನಗರ, ಗಿರಿ ನಗರ, ವಿಜಾಪುರ, ಸೀಬಾರದ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ‘ಕೇಂದ್ರಗಳು ಆರಂಭ ಆಗಿರುವುದು ಸಂತಸದ ವಿಚಾರ. ಇದರಿಂದ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಲಿದೆ’ ಎಂದರು.