ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದ ಗುಂಡ್ಲೂರು ಗ್ರಾಮದಲ್ಲಿ 4 ವರ್ಷಗಳ ಹಿಂದೆ ಕೆರೆ ಪಕ್ಕದಲ್ಲಿ ಕೊಳವೆಬಾವಿ ಕೊರೆಸಲಾಗಿತ್ತು. ಇದಕ್ಕೆ ಕೆರೆ ಮಧ್ಯದಲ್ಲಿ ಕಂಬಗಳನ್ನು ಹಾಕಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಪರಿವರ್ತಕ ಅಳವಡಿಸುವಾಗ ಕೆರೆಯಲ್ಲಿ ನೀರು ಇರಲಿಲ್ಲ. ಈ ವರ್ಷ ಮಳೆಯಿಂದ ಕೆರೆ ತುಂಬಿರುವುದು ಸಮಸ್ಯೆಗೆ ಕಾರಣವಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ಹೇಳುತ್ತಾರೆ.