<p><strong>ಮೊಳಕಾಲ್ಮುರು:</strong>ಪ್ರಾಣಾಪಾಯವನ್ನು ಲೆಕ್ಕಿಸದೇ ಕೆರೆ ಮಧ್ಯದಲ್ಲಿದ್ದ ವಿದ್ಯುತ್ ಪರಿವರ್ತಕದ ದುರಸ್ತಿಗೆ ಲೈನ್ಮ್ಯಾನ್ವೊಬ್ಬರು ಈಜಿಕೊಂಡು ಹೋಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.</p>.<p>ಲೈನ್ಮ್ಯಾನ್ಸುನೀಲ್ ಕುಮಾರ್ ಶನಿವಾರ ಪಟ್ಟಣದಿಂದ 2 ಕಿಮೀ ದೂರದಲ್ಲಿರುವ ಗುಂಡ್ಲೂರು ಕೆರೆಯಲ್ಲಿ ಈಜಿಕೊಂಡು ಅಲ್ಲಿದ್ದ ವಿದ್ಯುತ್ ಪರಿವರ್ತಕ ದುರಸ್ತಿ ಮಾಡಿದ್ದಾರೆ. ಈವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದ ಗುಂಡ್ಲೂರು ಗ್ರಾಮದಲ್ಲಿ 4 ವರ್ಷಗಳ ಹಿಂದೆ ಕೆರೆ ಪಕ್ಕದಲ್ಲಿ ಕೊಳವೆಬಾವಿ ಕೊರೆಸಲಾಗಿತ್ತು. ಇದಕ್ಕೆ ಕೆರೆ ಮಧ್ಯದಲ್ಲಿ ಕಂಬಗಳನ್ನು ಹಾಕಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಪರಿವರ್ತಕ ಅಳವಡಿಸುವಾಗ ಕೆರೆಯಲ್ಲಿ ನೀರು ಇರಲಿಲ್ಲ. ಈ ವರ್ಷ ಮಳೆಯಿಂದ ಕೆರೆ ತುಂಬಿರುವುದು ಸಮಸ್ಯೆಗೆ ಕಾರಣವಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ಹೇಳುತ್ತಾರೆ.</p>.<p>‘ವಿದ್ಯುತ್ ಪರಿವರ್ತಕದಲ್ಲಿನ ದೋಷದಿಂದಾಗಿ ವಿದ್ಯುತ್ ಸ್ಥಗಿತವಾಗಿತ್ತು. ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿರುವುದನ್ನು ಕಂಡು ಬೇರೆ ಮಾರ್ಗವಿಲ್ಲದೇ ಈಜಿಕೊಂಡು ಹೋಗಿ ದುರಸ್ತಿ ಮಾಡಿದ್ದೇನೆ. ಈ ವರ್ಷ ಮೂರ್ನಾಲ್ಕು ಬಾರಿ ಇದೇ ರೀತಿ ಈಜಿಕೊಂಡು ಹೋಗಿದ್ದೇನೆ. ಇದು ಅಪಾಯ ಎಂದು ತಿಳಿದಿದೆ. ಆದರೆ ಜನರ ಸಮಸ್ಯೆಗೆ ಸ್ಪಂದಿಸಲು ಈ ರೀತಿ ಮಾಡಿದ್ದೇನೆ’ ಎಂದು ಲೈನ್ಮ್ಯಾನ್ ಸುನೀಲ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಗುಂಡ್ಲೂರು ಘಟನೆ ಗಮನಕ್ಕೆ ಬಂದಿದೆ. ಸೋಮವಾರ ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿ ಕೊಳವೆಬಾವಿಗೆ ಪರ್ಯಾಯ ಮಾರ್ಗದಿಂದ ವಿದ್ಯುತ್ ಸಂಪರ್ಕ ಕೊಡಿಸಲಾಗುವುದು. ಸಮಸ್ಯೆ ಬಗ್ಗೆ ನನ್ನ ಗಮನಕ್ಕೆ ತಂದಿದ್ದರೆ ಈಜಿಕೊಂಡು ಹೋಗಲು ಅವಕಾಶ ನೀಡುತ್ತಿರಲಿಲ್ಲ’ ಎಂದುಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಪ್ರಸಾದ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong>ಪ್ರಾಣಾಪಾಯವನ್ನು ಲೆಕ್ಕಿಸದೇ ಕೆರೆ ಮಧ್ಯದಲ್ಲಿದ್ದ ವಿದ್ಯುತ್ ಪರಿವರ್ತಕದ ದುರಸ್ತಿಗೆ ಲೈನ್ಮ್ಯಾನ್ವೊಬ್ಬರು ಈಜಿಕೊಂಡು ಹೋಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.</p>.<p>ಲೈನ್ಮ್ಯಾನ್ಸುನೀಲ್ ಕುಮಾರ್ ಶನಿವಾರ ಪಟ್ಟಣದಿಂದ 2 ಕಿಮೀ ದೂರದಲ್ಲಿರುವ ಗುಂಡ್ಲೂರು ಕೆರೆಯಲ್ಲಿ ಈಜಿಕೊಂಡು ಅಲ್ಲಿದ್ದ ವಿದ್ಯುತ್ ಪರಿವರ್ತಕ ದುರಸ್ತಿ ಮಾಡಿದ್ದಾರೆ. ಈವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<p>ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದ ಗುಂಡ್ಲೂರು ಗ್ರಾಮದಲ್ಲಿ 4 ವರ್ಷಗಳ ಹಿಂದೆ ಕೆರೆ ಪಕ್ಕದಲ್ಲಿ ಕೊಳವೆಬಾವಿ ಕೊರೆಸಲಾಗಿತ್ತು. ಇದಕ್ಕೆ ಕೆರೆ ಮಧ್ಯದಲ್ಲಿ ಕಂಬಗಳನ್ನು ಹಾಕಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಪರಿವರ್ತಕ ಅಳವಡಿಸುವಾಗ ಕೆರೆಯಲ್ಲಿ ನೀರು ಇರಲಿಲ್ಲ. ಈ ವರ್ಷ ಮಳೆಯಿಂದ ಕೆರೆ ತುಂಬಿರುವುದು ಸಮಸ್ಯೆಗೆ ಕಾರಣವಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ಹೇಳುತ್ತಾರೆ.</p>.<p>‘ವಿದ್ಯುತ್ ಪರಿವರ್ತಕದಲ್ಲಿನ ದೋಷದಿಂದಾಗಿ ವಿದ್ಯುತ್ ಸ್ಥಗಿತವಾಗಿತ್ತು. ಕುಡಿಯುವ ನೀರಿನ ಸಮಸ್ಯೆ ಹೆಚ್ಚುತ್ತಿರುವುದನ್ನು ಕಂಡು ಬೇರೆ ಮಾರ್ಗವಿಲ್ಲದೇ ಈಜಿಕೊಂಡು ಹೋಗಿ ದುರಸ್ತಿ ಮಾಡಿದ್ದೇನೆ. ಈ ವರ್ಷ ಮೂರ್ನಾಲ್ಕು ಬಾರಿ ಇದೇ ರೀತಿ ಈಜಿಕೊಂಡು ಹೋಗಿದ್ದೇನೆ. ಇದು ಅಪಾಯ ಎಂದು ತಿಳಿದಿದೆ. ಆದರೆ ಜನರ ಸಮಸ್ಯೆಗೆ ಸ್ಪಂದಿಸಲು ಈ ರೀತಿ ಮಾಡಿದ್ದೇನೆ’ ಎಂದು ಲೈನ್ಮ್ಯಾನ್ ಸುನೀಲ್ ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಗುಂಡ್ಲೂರು ಘಟನೆ ಗಮನಕ್ಕೆ ಬಂದಿದೆ. ಸೋಮವಾರ ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿ ಕೊಳವೆಬಾವಿಗೆ ಪರ್ಯಾಯ ಮಾರ್ಗದಿಂದ ವಿದ್ಯುತ್ ಸಂಪರ್ಕ ಕೊಡಿಸಲಾಗುವುದು. ಸಮಸ್ಯೆ ಬಗ್ಗೆ ನನ್ನ ಗಮನಕ್ಕೆ ತಂದಿದ್ದರೆ ಈಜಿಕೊಂಡು ಹೋಗಲು ಅವಕಾಶ ನೀಡುತ್ತಿರಲಿಲ್ಲ’ ಎಂದುಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಪ್ರಸಾದ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>