‘ಬಿಜೆಪಿಯ ಕೋಮುವಾದಿ ಮನಸ್ಥಿತಿಯ ನಾಯಕರು ರಾಜ್ಯದ ಸ್ವಾಸ್ಥ್ಯವನ್ನು ಕದಡುತ್ತಿದ್ದಾರೆ. ಕಾಯಕ ಜೀವಿಗಳನ್ನು ಅವಮಾನಿಸಿದ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರ ಮನೆ ಎದುರು ಗೂಂಡಾಗಿರಿ ಪ್ರದರ್ಶಿಸಿದ ಸಂಸದರೊಬ್ಬರಿಂದ ಬಿಜೆಪಿ ಕಾರ್ಯಕರ್ತರು ಪ್ರಚೋದನೆ ಪಡೆದಂತೆ ಕಾಣುತ್ತಿದೆ. ರಾಜ್ಯದ ಘನತೆ, ಗೌರವವನ್ನು ಬಿಜೆಪಿ ಮಣ್ಣುಪಾಲು ಮಾಡುತ್ತಿದೆ’ ಎಂದು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.