<p><strong>ಚಿತ್ರದುರ್ಗ:</strong> ನಾಗರಿಕರು ಆರ್ಥಿಕ ಅಭಿವೃದ್ಧಿ ಹೊಂದುವುದರ ಜೊತೆಗೆ ದೇಶದ ಅಭಿವೃದ್ಧಿಗೂ ಕಾನೂನಾತ್ಮಕವಾಗಿ ತೆರಿಗೆ ಪಾವತಿಸಬೇಕು ಎಂದು ಕರ್ನಾಟಕ, ಗೋವಾ ವಲಯದ ಆದಾಯ ತೆರಿಗೆ ಇಲಾಖೆ ಪ್ರಧಾನ ಮುಖ್ಯ ಆಯುಕ್ತ ಬಿ.ಆರ್.ಬಾಲಕೃಷ್ಣನ್ ಹೇಳಿದರು.</p>.<p>ತಮಟಕಲ್ಲು ರಸ್ತೆ ಮಾರ್ಗದ ಆದಾಯ ತೆರಿಗೆ ಇಲಾಖೆ ಆವರಣದಲ್ಲಿ ಬುಧವಾರ ನೂತನವಾಗಿ ಆರಂಭವಾದ ‘ಆಯಕರ್’ ಸೇವಾ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಆದಾಯ ತೆರಿಗೆ ಇಲಾಖೆಯು ದೇಶದ ಆರ್ಥಿಕ ಭದ್ರತೆ ಹಾಗೂ ಅಭಿವೃದ್ಧಿಯ ಉದ್ದೇಶದೊಂದಿಗೆ ಕರ ಸಂಗ್ರಹಿಸುವ ಮಹತ್ವಪೂರ್ಣ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿದೆ. ತೆರಿಗೆಯನ್ನು ಸಮರ್ಪಕವಾಗಿ ಪಾವತಿಸುವುದು, ಸಮಾಜದಲ್ಲಿ ಗೌರವಯುತ ಕಾರ್ಯವಾಗಿದೆ’ ಎಂದು ತಿಳಿಸಿದರು.</p>.<p>‘ಇಲಾಖೆಯನ್ನು ಜನಸ್ನೇಹಿಯನ್ನಾಗಿಸಲು ಹಲವು ಸುಧಾರಣಾ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಆದಾಯ ತೆರಿಗೆ ಪಾವತಿ ಮತ್ತು ರಿಟರ್ನ್ಸ್ ಫೈಲ್ ಮಾಡುವುದು, ನಿಯಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಪ್ರಕ್ರಿಯೆಗಳನ್ನು ಇಲಾಖೆಯ ಅಧಿಕೃತ ವೆಬ್ಸೈಟ್ಗಳಲ್ಲಿ ಪ್ರಕಟಿಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ರಾಜ್ಯದ ಅನೇಕ ಶಿಕ್ಷಣ ಸಂಸ್ಥೆಗಳು, ಶಾಲಾ, ಕಾಲೇಜುಗಳು, ಸಣ್ಣ ತೆರಿಗೆದಾರರು, ವೇತನ ಆಧಾರಿತ ತೆರಿಗೆ ಕಡಿತಗೊಳಿಸುವವರು ಸೇರಿ ತೆರಿಗೆ ಪಾವತಿದಾರರ ಅನುಕೂಲಕ್ಕಾಗಿ ಆ್ಯಪ್ವೊಂದನ್ನು ಅಭಿವೃದ್ಧಿ ಪಡಿಸಲಾಗಿದೆ’ ಎಂದರು.</p>.<p>‘ತೆರಿಗೆ ಪಾವತಿ ಮತ್ತು ರಿಟರ್ನ್ಸ್ ಫೈಲ್ ಮಾಡಲು ಈ ಮುಂಚೆ ಅನೇಕರಿಗೆ ತೊಂದರೆ ಉಂಟಾಗುತ್ತಿತ್ತು. ಅಲ್ಲದೆ, ನಿರೀಕ್ಷಿತ ಮಟ್ಟದಲ್ಲಿ ರಿಟರ್ನ್ಸ್ ಫೈಲ್ ಆಗುತ್ತಿರಲಿಲ್ಲ. ಹೀಗಾಗಿ ಸುಲಭ ರೀತಿಯಲ್ಲಿ ವಿವಿಧ ಸೇವೆಯನ್ನು ಮೊಬೈಲ್ ಮೂಲಕವೇ ಒದಗಿಸುವ ಉದ್ದೇಶದಿಂದ ಆ್ಯಪ್ ಸಿದ್ಧಪಡಿಸಲಾಗಿದೆ’ ಎಂದು ಹೇಳಿದರು.</p>.<p>‘ತೆರಿಗೆ ವಂಚಿಸಿ, ಭ್ರಷ್ಟಾಚಾರದ ಮೂಲಕ ಅಕ್ರಮವಾಗಿ ಹಣ ಗಳಿಸುವವರನ್ನು ಮಟ್ಟಹಾಕಿ, ಅವರ ಮುಖವಾಡ ಕಳಚಿ ಬೀಳಿಸುವ ಸಾಮರ್ಥ್ಯ ಆದಾಯ ತೆರಿಗೆ ಇಲಾಖೆಗಿದೆ’ ಎಂದು ಹೇಳಿದರು.</p>.<p>‘ಪ್ರಭಾವಿ ಅಲ್ಲದವರ ಮೇಲೆ ಮಾತ್ರ ಇಲಾಖೆ ದಾಳಿ ಮಾಡಲಾಗುತ್ತದೆ ಎಂಬ ಆರೋಪವನ್ನು ದೂರ ಮಾಡಲಾಗಿದೆ. ಬೇನಾಮಿ ಆಸ್ತಿ ಹೊಂದಿದ ಪ್ರಭಾವಿಗಳ ವಿರುದ್ಧವೂ ಅಧಿಕಾರಿಗಳು ನಿರ್ಭಯವಾಗಿ ದಾಳಿ ನಡೆಸುತ್ತಿದ್ದಾರೆ. ಇದು ಸಾರ್ವಜನಿಕರ ಪ್ರಶಂಸೆಗೂ ಪಾತ್ರವಾಗಿದೆ’ ಎಂದು ತಿಳಿಸಿದರು.</p>.<p>‘ಕರ್ನಾಟಕ, ಗೋವಾ ವಲಯಕ್ಕೆ ಸಂಬಂಧಿಸಿದಂತೆ 2018ರಲ್ಲಿ ಒಟ್ಟು ₹ 1.21 ಲಕ್ಷ ಕೋಟಿ ಆದಾಯ ತೆರಿಗೆಯನ್ನು ಇಲಾಖೆ ಸಂಗ್ರಹಿಸಿದೆ. ಹಿಂದಿನ ವರ್ಷಕ್ಕಿಂತಲೂ ಈ ಬಾರಿ ಶೇ 17ರಷ್ಟು ಹೆಚ್ಚಿನ ಆದಾಯ ತೆರಿಗೆ ಸಂಗ್ರಹಿಸಲಾಗಿದ್ದು, ದೇಶದಲ್ಲಿ ಮುಂಬೈ ಮತ್ತು ದೆಹಲಿ ನಂತರ ಮೂರನೇ ಅತಿ ಹೆಚ್ಚು ಆದಾಯ ತೆರಿಗೆ ಸಂಗ್ರಹಿಸಿದ ವಲಯ ಇದಾಗಿದೆ. ರಾಜ್ಯದಲ್ಲಿ ಒಟ್ಟು 18 ಆಯಕರ್ ಸೇವಾ ಕೇಂದ್ರ ಪ್ರಾರಂಭಿಸಲಾಗಿದೆ’ ಎಂದರು.</p>.<p>ದಾವಣಗೆರೆಯ ಆದಾಯ ತೆರಿಗೆ ಇಲಾಖೆ ಪ್ರಧಾನ ಆಯುಕ್ತ ಗೋಲಿ ಶ್ರೀನಿವಾಸರಾವ್, ‘2018ರಲ್ಲಿ ಜಿಲ್ಲೆಯ 35 ಸಾವಿರ ತೆರಿಗೆ ಪಾವತಿದಾರರಿಂದ ₹ 23 ಕೋಟಿ ತೆರಿಗೆ ಸಂಗ್ರಹವಾಗಿದೆ’ ಎಂದರು.</p>.<p>ದಾವಣಗೆರೆಯ ಹೆಚ್ಚುವರಿ ಆಯುಕ್ತ ಸುನಿಲ್ ಕುಮಾರ್ ಅಗರವಾಲ್, ‘ಸಾರ್ವಜನಿಕ ಸೇವೆಯಲ್ಲಿ ಇಲಾಖೆಯೂ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ’ ಎಂದು ಹೇಳಿದರು.</p>.<p>‘ಆದಾಯ ತೆರಿಗೆ ಪಾವತಿದಾರರಿಗೆ ಒಂದೇ ಸೂರಿನಡಿ ಎಲ್ಲ ಸೇವೆ ಲಭ್ಯವಾಗುವಂತೆ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಆಯಕರ್ ಸೇವಾ ಕೇಂದ್ರ ಈ ನಿಟ್ಟಿನಲ್ಲಿ ಉತ್ತಮ ಹೆಜ್ಜೆಯಾಗಿದೆ’ ಎಂದರು.</p>.<p>ಚಿತ್ರದುರ್ಗದ ಆದಾಯ ತೆರಿಗೆ ಇಲಾಖೆ ಅಧಿಕಾರಿ ವರಪ್ರಸಾದ್, ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷ ಶಂಭುಲಿಂಗಪ್ಪ, ಲಕ್ಷ್ಮಿಕಾಂತರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ನಾಗರಿಕರು ಆರ್ಥಿಕ ಅಭಿವೃದ್ಧಿ ಹೊಂದುವುದರ ಜೊತೆಗೆ ದೇಶದ ಅಭಿವೃದ್ಧಿಗೂ ಕಾನೂನಾತ್ಮಕವಾಗಿ ತೆರಿಗೆ ಪಾವತಿಸಬೇಕು ಎಂದು ಕರ್ನಾಟಕ, ಗೋವಾ ವಲಯದ ಆದಾಯ ತೆರಿಗೆ ಇಲಾಖೆ ಪ್ರಧಾನ ಮುಖ್ಯ ಆಯುಕ್ತ ಬಿ.ಆರ್.ಬಾಲಕೃಷ್ಣನ್ ಹೇಳಿದರು.</p>.<p>ತಮಟಕಲ್ಲು ರಸ್ತೆ ಮಾರ್ಗದ ಆದಾಯ ತೆರಿಗೆ ಇಲಾಖೆ ಆವರಣದಲ್ಲಿ ಬುಧವಾರ ನೂತನವಾಗಿ ಆರಂಭವಾದ ‘ಆಯಕರ್’ ಸೇವಾ ಕೇಂದ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಆದಾಯ ತೆರಿಗೆ ಇಲಾಖೆಯು ದೇಶದ ಆರ್ಥಿಕ ಭದ್ರತೆ ಹಾಗೂ ಅಭಿವೃದ್ಧಿಯ ಉದ್ದೇಶದೊಂದಿಗೆ ಕರ ಸಂಗ್ರಹಿಸುವ ಮಹತ್ವಪೂರ್ಣ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿದೆ. ತೆರಿಗೆಯನ್ನು ಸಮರ್ಪಕವಾಗಿ ಪಾವತಿಸುವುದು, ಸಮಾಜದಲ್ಲಿ ಗೌರವಯುತ ಕಾರ್ಯವಾಗಿದೆ’ ಎಂದು ತಿಳಿಸಿದರು.</p>.<p>‘ಇಲಾಖೆಯನ್ನು ಜನಸ್ನೇಹಿಯನ್ನಾಗಿಸಲು ಹಲವು ಸುಧಾರಣಾ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಆದಾಯ ತೆರಿಗೆ ಪಾವತಿ ಮತ್ತು ರಿಟರ್ನ್ಸ್ ಫೈಲ್ ಮಾಡುವುದು, ನಿಯಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಪ್ರಕ್ರಿಯೆಗಳನ್ನು ಇಲಾಖೆಯ ಅಧಿಕೃತ ವೆಬ್ಸೈಟ್ಗಳಲ್ಲಿ ಪ್ರಕಟಿಸಲಾಗುತ್ತಿದೆ’ ಎಂದು ಹೇಳಿದರು.</p>.<p>‘ರಾಜ್ಯದ ಅನೇಕ ಶಿಕ್ಷಣ ಸಂಸ್ಥೆಗಳು, ಶಾಲಾ, ಕಾಲೇಜುಗಳು, ಸಣ್ಣ ತೆರಿಗೆದಾರರು, ವೇತನ ಆಧಾರಿತ ತೆರಿಗೆ ಕಡಿತಗೊಳಿಸುವವರು ಸೇರಿ ತೆರಿಗೆ ಪಾವತಿದಾರರ ಅನುಕೂಲಕ್ಕಾಗಿ ಆ್ಯಪ್ವೊಂದನ್ನು ಅಭಿವೃದ್ಧಿ ಪಡಿಸಲಾಗಿದೆ’ ಎಂದರು.</p>.<p>‘ತೆರಿಗೆ ಪಾವತಿ ಮತ್ತು ರಿಟರ್ನ್ಸ್ ಫೈಲ್ ಮಾಡಲು ಈ ಮುಂಚೆ ಅನೇಕರಿಗೆ ತೊಂದರೆ ಉಂಟಾಗುತ್ತಿತ್ತು. ಅಲ್ಲದೆ, ನಿರೀಕ್ಷಿತ ಮಟ್ಟದಲ್ಲಿ ರಿಟರ್ನ್ಸ್ ಫೈಲ್ ಆಗುತ್ತಿರಲಿಲ್ಲ. ಹೀಗಾಗಿ ಸುಲಭ ರೀತಿಯಲ್ಲಿ ವಿವಿಧ ಸೇವೆಯನ್ನು ಮೊಬೈಲ್ ಮೂಲಕವೇ ಒದಗಿಸುವ ಉದ್ದೇಶದಿಂದ ಆ್ಯಪ್ ಸಿದ್ಧಪಡಿಸಲಾಗಿದೆ’ ಎಂದು ಹೇಳಿದರು.</p>.<p>‘ತೆರಿಗೆ ವಂಚಿಸಿ, ಭ್ರಷ್ಟಾಚಾರದ ಮೂಲಕ ಅಕ್ರಮವಾಗಿ ಹಣ ಗಳಿಸುವವರನ್ನು ಮಟ್ಟಹಾಕಿ, ಅವರ ಮುಖವಾಡ ಕಳಚಿ ಬೀಳಿಸುವ ಸಾಮರ್ಥ್ಯ ಆದಾಯ ತೆರಿಗೆ ಇಲಾಖೆಗಿದೆ’ ಎಂದು ಹೇಳಿದರು.</p>.<p>‘ಪ್ರಭಾವಿ ಅಲ್ಲದವರ ಮೇಲೆ ಮಾತ್ರ ಇಲಾಖೆ ದಾಳಿ ಮಾಡಲಾಗುತ್ತದೆ ಎಂಬ ಆರೋಪವನ್ನು ದೂರ ಮಾಡಲಾಗಿದೆ. ಬೇನಾಮಿ ಆಸ್ತಿ ಹೊಂದಿದ ಪ್ರಭಾವಿಗಳ ವಿರುದ್ಧವೂ ಅಧಿಕಾರಿಗಳು ನಿರ್ಭಯವಾಗಿ ದಾಳಿ ನಡೆಸುತ್ತಿದ್ದಾರೆ. ಇದು ಸಾರ್ವಜನಿಕರ ಪ್ರಶಂಸೆಗೂ ಪಾತ್ರವಾಗಿದೆ’ ಎಂದು ತಿಳಿಸಿದರು.</p>.<p>‘ಕರ್ನಾಟಕ, ಗೋವಾ ವಲಯಕ್ಕೆ ಸಂಬಂಧಿಸಿದಂತೆ 2018ರಲ್ಲಿ ಒಟ್ಟು ₹ 1.21 ಲಕ್ಷ ಕೋಟಿ ಆದಾಯ ತೆರಿಗೆಯನ್ನು ಇಲಾಖೆ ಸಂಗ್ರಹಿಸಿದೆ. ಹಿಂದಿನ ವರ್ಷಕ್ಕಿಂತಲೂ ಈ ಬಾರಿ ಶೇ 17ರಷ್ಟು ಹೆಚ್ಚಿನ ಆದಾಯ ತೆರಿಗೆ ಸಂಗ್ರಹಿಸಲಾಗಿದ್ದು, ದೇಶದಲ್ಲಿ ಮುಂಬೈ ಮತ್ತು ದೆಹಲಿ ನಂತರ ಮೂರನೇ ಅತಿ ಹೆಚ್ಚು ಆದಾಯ ತೆರಿಗೆ ಸಂಗ್ರಹಿಸಿದ ವಲಯ ಇದಾಗಿದೆ. ರಾಜ್ಯದಲ್ಲಿ ಒಟ್ಟು 18 ಆಯಕರ್ ಸೇವಾ ಕೇಂದ್ರ ಪ್ರಾರಂಭಿಸಲಾಗಿದೆ’ ಎಂದರು.</p>.<p>ದಾವಣಗೆರೆಯ ಆದಾಯ ತೆರಿಗೆ ಇಲಾಖೆ ಪ್ರಧಾನ ಆಯುಕ್ತ ಗೋಲಿ ಶ್ರೀನಿವಾಸರಾವ್, ‘2018ರಲ್ಲಿ ಜಿಲ್ಲೆಯ 35 ಸಾವಿರ ತೆರಿಗೆ ಪಾವತಿದಾರರಿಂದ ₹ 23 ಕೋಟಿ ತೆರಿಗೆ ಸಂಗ್ರಹವಾಗಿದೆ’ ಎಂದರು.</p>.<p>ದಾವಣಗೆರೆಯ ಹೆಚ್ಚುವರಿ ಆಯುಕ್ತ ಸುನಿಲ್ ಕುಮಾರ್ ಅಗರವಾಲ್, ‘ಸಾರ್ವಜನಿಕ ಸೇವೆಯಲ್ಲಿ ಇಲಾಖೆಯೂ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿದೆ’ ಎಂದು ಹೇಳಿದರು.</p>.<p>‘ಆದಾಯ ತೆರಿಗೆ ಪಾವತಿದಾರರಿಗೆ ಒಂದೇ ಸೂರಿನಡಿ ಎಲ್ಲ ಸೇವೆ ಲಭ್ಯವಾಗುವಂತೆ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಆಯಕರ್ ಸೇವಾ ಕೇಂದ್ರ ಈ ನಿಟ್ಟಿನಲ್ಲಿ ಉತ್ತಮ ಹೆಜ್ಜೆಯಾಗಿದೆ’ ಎಂದರು.</p>.<p>ಚಿತ್ರದುರ್ಗದ ಆದಾಯ ತೆರಿಗೆ ಇಲಾಖೆ ಅಧಿಕಾರಿ ವರಪ್ರಸಾದ್, ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷ ಶಂಭುಲಿಂಗಪ್ಪ, ಲಕ್ಷ್ಮಿಕಾಂತರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>