ಹಿರಿಯೂರು ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 150ರ ವಿಸ್ತರಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇದಕ್ಕೆ ಎಚ್.ಕೆ.ನೇತ್ರಾ ಎಂಬುವರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಭೂಮಿಗೆ ಪರಿಹಾರ ಮಂಜೂರು ಮಾಡುವ ಪ್ರಕ್ರಿಯೆ ಹಲವು ದಿನಗಳಿಂದ ಬಾಕಿ ಇದೆ. ಹೀಗಾಗಿ, ನೇತ್ರಾ ಅವರು ಆಗಸ್ಟ್ ತಿಂಗಳಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿಯನ್ನು ಭೇಟಿ ಮಾಡಿ ಚರ್ಚಿಸಿದ್ದರು. ಕಚೇರಿಯ ವ್ಯವಸ್ಥಾಪಕರ ಬಳಿ ವ್ಯವಹರಿಸುವಂತೆ ಭೂಸ್ವಾಧೀನಾಧಿಕಾರಿ ಸೂಚಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.