<p><strong>ಹೊಸದುರ್ಗ</strong>: ಆಸ್ತಿ ಮಾರ್ಟ್ಗೇಜ್ ವಿಚಾರಕ್ಕೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಾಲ್ಲೂಕು ಉಪನೋಂದಣಾಧಿಕಾರಿ ಕಚೇರಿಯ ಪ್ರಭಾರ ಉಪನೋಂದಣಾಧಿಕಾರಿ ಬುಧವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.</p>.<p>ಪಟ್ಟಣದ ಕಚೇರಿಯಲ್ಲಿ ಪ್ರಭಾರ ಉಪನೋಂದಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿ. ಮಂಜುನಾಥ್, ಗುರುಪ್ರಸಾದ್ ಎಂಬುವರ ಬಳಿ ₹ 4 ಸಾವಿರ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.</p>.<p>ಹೊಸದುರ್ಗ ಪಟ್ಟಣದ ಡಿ.ಎಚ್. ಗುರುಪ್ರಸಾದ್ ತಮ್ಮ ಆಸ್ತಿಯನ್ನು ಆಧಾರ ನೋಂದಣಿ ಮಾಡಿಸಲು ತಾಲ್ಲೂಕು ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಶುಲ್ಕ ಪಾವತಿಸಿದ್ದಾರೆ. ಫೆ. 24 ರಂದು ಮಧ್ಯಾಹ್ನ 3ಕ್ಕೆ ಆಧಾರ ನೋಂದಣಿ (ಮಾರ್ಟ್ಗೇಜ್) ಮಾಡಿಕೊಟ್ಟ ಪ್ರಭಾರ ಉಪನೋಂದಣಾಧಿಕಾರಿ ಮಂಜುನಾಥ್ ₹ 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಗುರುಪ್ರಸಾದ್ ಮಾರ್ಚ್ 2ರಂದು ಎಸಿಬಿಗೆ ದೂರು ನೀಡಿದ್ದರು.</p>.<p>ಎಸಿಬಿ ಪ್ರಭಾರ ಪೊಲೀಸ್ ಅಧಿಕಾರಿ ಕಲಾ ಕೃಷ್ಣಮೂರ್ತಿ ಇವರ ಮಾರ್ಗದರ್ಶನದಲ್ಲಿ ಪಿಐ ಪ್ರವೀಣ್ ನೇತೃತ್ವದ ತಂಡ ದಾಳಿ ನಡೆಸಿ ಪಿ. ಮಂಜುನಾಥ ಅವರನ್ನು ದಸ್ತಗಿರಿ ಮಾಡಿದ್ದಾರೆ. ಸಿಬ್ಬಂದಿಗಳಾದ ಎ. ಮಾರುತಿರಾಂ, ಓಬಣ್ಣ, ಹರೀಶ್ ಕುಮಾರ್, ಫಕ್ರುದ್ದಿನ್, ಯತಿರಾಜ, ಫಯಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ಆಸ್ತಿ ಮಾರ್ಟ್ಗೇಜ್ ವಿಚಾರಕ್ಕೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ತಾಲ್ಲೂಕು ಉಪನೋಂದಣಾಧಿಕಾರಿ ಕಚೇರಿಯ ಪ್ರಭಾರ ಉಪನೋಂದಣಾಧಿಕಾರಿ ಬುಧವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.</p>.<p>ಪಟ್ಟಣದ ಕಚೇರಿಯಲ್ಲಿ ಪ್ರಭಾರ ಉಪನೋಂದಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪಿ. ಮಂಜುನಾಥ್, ಗುರುಪ್ರಸಾದ್ ಎಂಬುವರ ಬಳಿ ₹ 4 ಸಾವಿರ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.</p>.<p>ಹೊಸದುರ್ಗ ಪಟ್ಟಣದ ಡಿ.ಎಚ್. ಗುರುಪ್ರಸಾದ್ ತಮ್ಮ ಆಸ್ತಿಯನ್ನು ಆಧಾರ ನೋಂದಣಿ ಮಾಡಿಸಲು ತಾಲ್ಲೂಕು ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಶುಲ್ಕ ಪಾವತಿಸಿದ್ದಾರೆ. ಫೆ. 24 ರಂದು ಮಧ್ಯಾಹ್ನ 3ಕ್ಕೆ ಆಧಾರ ನೋಂದಣಿ (ಮಾರ್ಟ್ಗೇಜ್) ಮಾಡಿಕೊಟ್ಟ ಪ್ರಭಾರ ಉಪನೋಂದಣಾಧಿಕಾರಿ ಮಂಜುನಾಥ್ ₹ 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಗುರುಪ್ರಸಾದ್ ಮಾರ್ಚ್ 2ರಂದು ಎಸಿಬಿಗೆ ದೂರು ನೀಡಿದ್ದರು.</p>.<p>ಎಸಿಬಿ ಪ್ರಭಾರ ಪೊಲೀಸ್ ಅಧಿಕಾರಿ ಕಲಾ ಕೃಷ್ಣಮೂರ್ತಿ ಇವರ ಮಾರ್ಗದರ್ಶನದಲ್ಲಿ ಪಿಐ ಪ್ರವೀಣ್ ನೇತೃತ್ವದ ತಂಡ ದಾಳಿ ನಡೆಸಿ ಪಿ. ಮಂಜುನಾಥ ಅವರನ್ನು ದಸ್ತಗಿರಿ ಮಾಡಿದ್ದಾರೆ. ಸಿಬ್ಬಂದಿಗಳಾದ ಎ. ಮಾರುತಿರಾಂ, ಓಬಣ್ಣ, ಹರೀಶ್ ಕುಮಾರ್, ಫಕ್ರುದ್ದಿನ್, ಯತಿರಾಜ, ಫಯಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>