<p><strong>ಚಿತ್ರದುರ್ಗ: </strong>ಗುತ್ತಿಗೆದಾರರೊಬ್ಬರಿಂದ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭೂತಪ್ಪ ಹಾಗೂ ಅಕೌಂಟ್ಸ್ ಕನ್ಸಲ್ಟೆಂಟ್ ಸರ್ಪರಾಜ್ ಗುರುವಾರ ಭಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.</p>.<p>ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಡಿವೈಎಸ್ಪಿ ಪರಮೇಶ್ವರ್ ನೇತೃತ್ವದ ತಂಡ ಇಬ್ಬರನ್ನು ವಶಕ್ಕೆ ಪಡೆದಿದೆ. ಲಂಚ ಮೊತ್ತವಾದ ₹ 5 ಸಾವಿರವನ್ನು ಜಪ್ತಿ ಮಾಡಲಾಗಿದೆ.</p>.<p>ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಅಗತ್ಯವಿರುವ ಅಲ್ಯೂಮಿನಿಯಂ ಗ್ಲಾಸ್ ಸಾಮಗ್ರಿಯನ್ನು ಒದಗಿಸುವ ಗುತ್ತಿಗೆಯನ್ನು ವೈ.ಆರ್.ನಾಗೇಂದ್ರ ಎಂಬುವರು ಪಡೆದಿದ್ದರು. ₹ 99,643 ಮೊತ್ತದ ಈ ಕೆಲಸಕ್ಕೆ ಆದೇಶ ಸಿಕ್ಕಿದ್ದು, ₹ 60 ಸಾವಿರವನ್ನು ನೀಡಲಾಗಿತ್ತು. ಬಾಕಿ ಉಳಿದ ₹ 39,643ಹಣವನ್ನು ಹಸ್ತಾಂತರಿಸಲು ₹ 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಮೂಲಗಳು ಮಾಹಿತಿ ನೀಡಿವೆ.</p>.<p>ಈ ಕುರಿತು ವೈ.ಆರ್.ನಾಗೇಂದ್ರ ಅವರು ಎಸಿಬಿಗೆ ದೂರು ನೀಡಿದ್ದರು. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದಾಗ ಮುಖ್ಯಾಧಿಕಾರಿ ಸಾಕ್ಷ್ಯ ಸಹಿತವಾಗಿ ಸಿಕ್ಕಿಬಿದ್ದಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ರಾತ್ರಿಯವರೆಗೆ ವಿಚಾರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಗುತ್ತಿಗೆದಾರರೊಬ್ಬರಿಂದ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭೂತಪ್ಪ ಹಾಗೂ ಅಕೌಂಟ್ಸ್ ಕನ್ಸಲ್ಟೆಂಟ್ ಸರ್ಪರಾಜ್ ಗುರುವಾರ ಭಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.</p>.<p>ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಡಿವೈಎಸ್ಪಿ ಪರಮೇಶ್ವರ್ ನೇತೃತ್ವದ ತಂಡ ಇಬ್ಬರನ್ನು ವಶಕ್ಕೆ ಪಡೆದಿದೆ. ಲಂಚ ಮೊತ್ತವಾದ ₹ 5 ಸಾವಿರವನ್ನು ಜಪ್ತಿ ಮಾಡಲಾಗಿದೆ.</p>.<p>ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಅಗತ್ಯವಿರುವ ಅಲ್ಯೂಮಿನಿಯಂ ಗ್ಲಾಸ್ ಸಾಮಗ್ರಿಯನ್ನು ಒದಗಿಸುವ ಗುತ್ತಿಗೆಯನ್ನು ವೈ.ಆರ್.ನಾಗೇಂದ್ರ ಎಂಬುವರು ಪಡೆದಿದ್ದರು. ₹ 99,643 ಮೊತ್ತದ ಈ ಕೆಲಸಕ್ಕೆ ಆದೇಶ ಸಿಕ್ಕಿದ್ದು, ₹ 60 ಸಾವಿರವನ್ನು ನೀಡಲಾಗಿತ್ತು. ಬಾಕಿ ಉಳಿದ ₹ 39,643ಹಣವನ್ನು ಹಸ್ತಾಂತರಿಸಲು ₹ 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಮೂಲಗಳು ಮಾಹಿತಿ ನೀಡಿವೆ.</p>.<p>ಈ ಕುರಿತು ವೈ.ಆರ್.ನಾಗೇಂದ್ರ ಅವರು ಎಸಿಬಿಗೆ ದೂರು ನೀಡಿದ್ದರು. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದಾಗ ಮುಖ್ಯಾಧಿಕಾರಿ ಸಾಕ್ಷ್ಯ ಸಹಿತವಾಗಿ ಸಿಕ್ಕಿಬಿದ್ದಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ರಾತ್ರಿಯವರೆಗೆ ವಿಚಾರಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>