ಚಿತ್ರದುರ್ಗ: ಚಿಕ್ಕಜಾಜೂರು ಸಮೀಪದ ಕೊಡಗವಳ್ಳಿಯಲ್ಲಿರುವ ಕೆಎಎಸ್ ಅಧಿಕಾರಿ ಕೆ.ಎನ್.ರುದ್ರೇಶ್ ಅವರ ಮನೆ ಹಾಗೂ ಫಾರ್ಮ್ಹೌಸ್ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದರು.
ರುದ್ರೇಶ್ ಅವರು ಗದಗ ನಗರಾಭಿವೃದ್ಧಿ ಕೋಶದ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಗದಗ ಹಾಗೂ ಚಿತ್ರದುರ್ಗ ಜಿಲ್ಲೆಯ ಮೂರು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಕೊಡಗವಳ್ಳಿಯು ರುದ್ರೇಶ್ ಅವರ ಸ್ವಗ್ರಾಮ. ನಸುಕಿನಲ್ಲಿ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದ ಎಸಿಬಿ ತಂಡ ಇಡೀ ದಿನ ಪರಿಶೀಲನೆ ನಡೆಸಿತು.