ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ‘ಬೆಸ್ಕಾಂ’ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಣ್ಣ ಎಂಬುವರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
ಶೀಘ್ರ ಸಂಪರ್ಕ ಯೋಜನೆಯಡಿ ವಿದ್ಯುತ್ ಪರಿವರ್ತಕ ಮಂಜೂರು ಮಾಡಲು ಬೆಸ್ಕಾಂ ಕಚೇರಿಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಪೊಲೀಸರು ಬಂಧಿಸಿದ್ದಾರೆ. ಗುತ್ತಿಗೆದಾರ ಪಾತೇಗೌಡ ಎಂಬುವರು ಎಸಿಬಿಗೆ ದೂರು ನೀಡಿದ್ದರು.
ವಿದ್ಯುತ್ ಪರಿವರ್ತಕ ಮಂಜೂರು ಮಾಡಲು ಶಿವಣ್ಣ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ₹ 15 ಸಾವಿರ ಲಂಚ ಪಡೆಯುತ್ತಿದ್ದಾಗ ಎಸಿಬಿ ಇನ್ಸ್ಪೆಕ್ಟರ್ ಪ್ರವೀಣ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದೆ ಎಂದು ಮೂಲಗಳು ಮಾಹಿತಿ ನೀಡಿವೆ.