ಚಿತ್ರದುರ್ಗ ನಗರದ ಶ್ರೀರಾಮ ಬಡಾವಣೆಯ ನಿವಾಸಿಯಾಗಿರುವ ಶಿಕ್ಷಕ ಟಿ.ಆರ್.ಸುರೇಶ್ ಅವರು ಮದಕರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯನಗರ ಬಡಾವಣೆಯಲ್ಲಿ ನಿವೇಶನವೊಂದನ್ನು ಹೊಂದಿದ್ದಾರೆ. ಈ ನಿವೇಶನದ ಇ–ಖಾತೆಗೆ ಸೆ.28ರಂದು ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಿಸಲು ಜ.20ರಂದು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದಾಗ ಪಿಡಿಒ ₹ 6 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.