ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಕಪಿಲೆಹಟ್ಟಿ ಸಮೀಪ ಲಾರಿ ಮತ್ತು ವೋಲ್ವೊ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಲಾರಿ ಚಾಲಕ ಮೃತಪಟ್ಟಿದ್ದಾರೆ. ಅಪಘಾತದ ನಂತರ ಬಸ್ ಹೊತ್ತಿ ಉರಿದಿದ್ದು, ಸ್ವಲ್ಪದರಲ್ಲಿ ಭಾರಿ ದುರಂತ ತಪ್ಪಿದೆ.
ಲಾರಿ ಚಾಲಕ ವೆಂಕಟೇಶ್ (40) ಮೃತಪಟ್ಟವರು. ವೋಲ್ವೊ ಬಸ್ನಲ್ಲಿ ಇದ್ದ 15 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ಬೆಂಗಳೂರಿನಿಂದ ಚಳ್ಳಕೆರೆಗೆ, ಲಾರಿ ಬಳ್ಳಾರಿಯಿಂದ ಬೆಂಗಳೂರಿಗೆ ಹೋಗುತ್ತಿತ್ತು.